Tuesday, October 1, 2024
Tuesday, October 1, 2024

Rovers Club Shivamogga ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರ ಪುಸ್ತಕಗಳ ಅಧ್ಯಯನ ಮಾಡಬೇಕು-ಕೆ.ಸಿ.ಮಲ್ಲಿಕಾರ್ಜುನಪ್ಪ

Date:

Rovers Club Shivamogga ಇಂದಿನ ಯುವ ಪೀಳಿಗೆಯು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಸ್ತಕಗಳ ಅಧ್ಯಯನ ಮಾಡಬೇಕು. ಅವರ ಜೀವನ ಚರಿತ್ರೆಯಿಂದ ಸ್ಫೂರ್ತಿ ಪಡೆದು ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ರೋವರ್ಸ್ ಕ್ಲಬ್ ಅಧ್ಯಕ್ಷ ಕೆ.ಸಿ.ಮಲ್ಲಿಕಾರ್ಜುನಪ್ಪ ಹೇಳಿದರು.

ಶಿವಮೊಗ್ಗ ನಗರದ ರೋವರ್ಸ್ ಕ್ಲಬ್ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಅಹಿಂಸೆ ತತ್ವವನ್ನು ಮಹಾತ್ಮ ಗಾಂಧೀಜಿ ಪ್ರತಿಪಾದಿಸಿ ಜೀವನುದ್ದಕ್ಕೂ ಪಾಲಿಸಿಕೊಂಡು ಬಂದರು. ಸತ್ಯ ಮಾರ್ಗದಲ್ಲಿ ಜೀವನ ನಡೆಸಬೇಕು ಎಂದು ತಿಳಿಸಿದರು.

Rovers Club Shivamogga ಮಹಾತ್ಮ ಗಾಂಧೀಜಿ ಜೀವನವು ವಿಶ್ವದ ಸಾವಿರಾರು ಜನರಿಗೆ ಪ್ರೇರಣೆಯನ್ನು ಒದಗಿಸಿದ್ದು, ಲಕ್ಷಾಂತರ ಜನರು ಗಾಂಧೀಜಿ ಜೀವನ ಚರಿತ್ರೆಯಿಂದ ಪ್ರಭಾವಿತರಾಗಿದ್ದಾರೆ. ಯುವ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುವಲ್ಲಿ ಗಾಂಧೀಜಿ ಅವರ ಜೀವನವು ಪರಿಣಾಮ ಬೀರುತ್ತದೆ ಎಂದರು.

ರೋವರ್ಸ್ ಕ್ಲಬ್ ಕಾರ್ಯದರ್ಶಿ ಆ.ಮ.ಪ್ರಕಾಶ್, ಖಜಾಂಚಿ ಎ.ಎಚ್.ಸುನೀಲ್, ನಿರ್ದೇಶಕರಾದ ಜಿ.ವಿಜಯ್‌ಕುಮಾರ್, ಚಿನ್ನಪ್ಪ, ವಿನಾಯಕ, ಸಂದೀಪ್ ಕುಮಾರ್ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...