Thursday, March 19, 2026
Thursday, March 19, 2026

Chamber Of commerce Shivamogga ಗಲಭೆ ಪೀಡಿತ ಪ್ರದೇಶಕ್ಕೆಸೆಕ್ಷನ್ 144 ಸೀಮಿತವಾಗಿರಲಿ: ಮಿಕ್ಕೆಡೆ ವ್ಯಾಪಾರಕ್ಕೆ ಅನುವುಮಾಡಿಕೊಡಿ- ಎನ್.ಗೋಪಿನಾಥ್

Date:

Chamber Of commerce Shivamogga ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ‌. ಇದರಿಂದ ಶಿವಮೊಗ್ಗದಲ್ಲಿ ಉದ್ಯಮಕ್ಕೆ ತೊಂದರೆ ಉಂಟಾಗಿದೆ. ನಿಷೇಧಾಜ್ಞೆಯನ್ನು ರಾಗಿಗುಡ್ಡಕ್ಕೆ ಸೀಮಿತಗೊಳಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಮನವಿ ಮಾಡಿದರು.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು , ನಿಷೇಧಾಜ್ಞೆಯನ್ನು ಇಡೀ ಶಿವಮೊಗ್ಗ ನಗರಕ್ಕೆ ವಿಸ್ತರಿಸಿರುವ ಕ್ರಮ ಸರಿಯಲ್ಲ ಎಂದು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.

Chamber Of commerce Shivamogga ರಾಗಿಗುಡ್ಡದಲ್ಲಿ ಅಹಿತಕರ ಘಟನೆ ಸಂಭವಿಸಿದೆ. ಆದರೆ ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಅಂಗಡಿ – ಮುಂಗಟ್ಟು ಬಂದ್ ಮಾಡಿಸಲಾಗಿದೆ. ಇದರಿಂದ ಉದ್ಯೋಗ ಮಾಡುವವರಿಗೆ ಉದ್ಯಮಿಗಳಿಗೆ ತೊಂದರೆ ಎದುರಾಗುತ್ತದೆ. ಈಗಾಗಲೇ ಕಳೆದ ವಾರ ಮೂರ್ನಾಲ್ಕು ದಿನ ವಿವಿಧ ಕಾರಣಕ್ಕೆ ಉದ್ಯಮಗಳಲ್ಲಿ ಸ್ಥಗಿತಗೊಳಿಸಿದ್ದೆವು. ಈಗ ಪುನಃ ವ್ಯವಹಾರ ಸ್ಥಗಿತ ಮಾಡಿದರೆ ಸಮಸ್ಯೆಯಾಗಲಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...