Monday, February 2, 2026
Monday, February 2, 2026

Chamber Of commerce Shivamogga ಗಲಭೆ ಪೀಡಿತ ಪ್ರದೇಶಕ್ಕೆಸೆಕ್ಷನ್ 144 ಸೀಮಿತವಾಗಿರಲಿ: ಮಿಕ್ಕೆಡೆ ವ್ಯಾಪಾರಕ್ಕೆ ಅನುವುಮಾಡಿಕೊಡಿ- ಎನ್.ಗೋಪಿನಾಥ್

Date:

Chamber Of commerce Shivamogga ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ‌. ಇದರಿಂದ ಶಿವಮೊಗ್ಗದಲ್ಲಿ ಉದ್ಯಮಕ್ಕೆ ತೊಂದರೆ ಉಂಟಾಗಿದೆ. ನಿಷೇಧಾಜ್ಞೆಯನ್ನು ರಾಗಿಗುಡ್ಡಕ್ಕೆ ಸೀಮಿತಗೊಳಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಮನವಿ ಮಾಡಿದರು.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು , ನಿಷೇಧಾಜ್ಞೆಯನ್ನು ಇಡೀ ಶಿವಮೊಗ್ಗ ನಗರಕ್ಕೆ ವಿಸ್ತರಿಸಿರುವ ಕ್ರಮ ಸರಿಯಲ್ಲ ಎಂದು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.

Chamber Of commerce Shivamogga ರಾಗಿಗುಡ್ಡದಲ್ಲಿ ಅಹಿತಕರ ಘಟನೆ ಸಂಭವಿಸಿದೆ. ಆದರೆ ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಅಂಗಡಿ – ಮುಂಗಟ್ಟು ಬಂದ್ ಮಾಡಿಸಲಾಗಿದೆ. ಇದರಿಂದ ಉದ್ಯೋಗ ಮಾಡುವವರಿಗೆ ಉದ್ಯಮಿಗಳಿಗೆ ತೊಂದರೆ ಎದುರಾಗುತ್ತದೆ. ಈಗಾಗಲೇ ಕಳೆದ ವಾರ ಮೂರ್ನಾಲ್ಕು ದಿನ ವಿವಿಧ ಕಾರಣಕ್ಕೆ ಉದ್ಯಮಗಳಲ್ಲಿ ಸ್ಥಗಿತಗೊಳಿಸಿದ್ದೆವು. ಈಗ ಪುನಃ ವ್ಯವಹಾರ ಸ್ಥಗಿತ ಮಾಡಿದರೆ ಸಮಸ್ಯೆಯಾಗಲಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...