Karnataka Health Department ಹೃದಯ ಸ್ತಂಭನಕ್ಕೆ ಒಳಗಾಗುವ ವ್ಯಕ್ತಿಗಳಿಗೆ ನೀಡಬೇಕಾದ ಪ್ರಥಮ ಚಿಕಿತ್ಸೆ ಸಿಪಿಆರ್ ಸೇರಿದಂತೆ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಪಾಠಗಳನ್ನು ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪಠ್ಯದಲ್ಲಿ ಸೇರ್ಪಡೆ ಮಾಡಲು ಆರೋಗ್ಯ ಇಲಾಖೆಯು ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.
Karnataka Health Department ಶಿಕ್ಷಣ ಇಲಾಖೆ ಒಪ್ಪಿಗೆ ಸೂಚಿಸಿದರೆ ಮುಂದಿನ ವರ್ಷವೇ ಆರೋಗ್ಯದ ಮಹತ್ವದ ಕುರಿತಾದ ಪಠ್ಯ ಸೇರ್ಪಡೆಯಾಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.