Thursday, June 18, 2026
Thursday, June 18, 2026

BJP Karnataka ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ರಾಜ್ಯದಲ್ಲಿ ಮತಾಂಧರ ಹಾವಳಿ ಹೆಚ್ಚಿದೆ- ಡಾ.ಅಶ್ವತ್ಥನಾರಾಯಣ

Date:

BJP Karnataka ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದ ಪರಿಣಾಮವಾಗಿ ರಾಜ್ಯದಲ್ಲಿ ಮತಾಂಧರ ಹಾವಳಿ ಹೆಚ್ಚಾಗಿದೆ.ಶಿವಮೊಗ್ಗದಲ್ಲಿ ಧರ್ಮಾಂಧ ಟಿಪ್ಪು, ಔರಂಗಜೇಬ್‌ ಅವರನ್ನು ಮೆರೆಸಲಾಗುತ್ತಿದೆ. ಕೋಮು ಗಲಭೆಯನ್ನು ತಡೆಯಲು ಹೋದ ಪೊಲೀಸ್‌ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಶಾಸಕರಾದ ಸಿ. ಎನ್. ಅಶ್ವಥ್ ನಾರಾಯಣ ಅವರು ತ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಮಾಯಕ ಹಿಂದೂಗಳ ಮನೆಯ ಮೇಲೆ ದಾಳಿ ನಡೆಸುತ್ತಿರುವುದನ್ನು ನೋಡಿಯೂ ನೋಡದವರ ಹಾಗೆ ಕುಳಿತಿರುವ ಕಾಂಗ್ರೆಸ್‌ ಸರ್ಕಾರ ಜನತೆಗೆ ಸುರಕ್ಷತೆ ನೀಡಲು ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

BJP Karnataka ಗೃಹ ಸಚಿವರಿಗೆ ಇವು ಒಂದು ಸಣ್ಣ ಘಟನೆಯಂತೆ ಕಾಣುತ್ತದೆ, ಉಪಮುಖ್ಯಮಂತ್ರಿ ಅವರಿಗೆ ಭಯೋತ್ಪಾದಕರು ಸಹೋದರರಂತೆ ಕಾಣುತ್ತಾರೆ, ಮುಖ್ಯಮಂತ್ರಿ ಅವರು ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸುತ್ತಿದ್ದಾರೆ ಎಂದು ತಿಳಿಸಿದರು.

ಇಂತಹ ಹಿಂದೂ ವಿರೋಧಿ ಸರ್ಕಾರದಿಂದ “ಸರ್ವ ಜನಾಂಗದ ಶಾಂತಿಯ ತೋಟ”ವಾಗಿರುವ ಕರ್ನಾಟಕದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...