Health Department ಯಾವುದೇ ಮಕ್ಕಳು ಮತ್ತು ಗರ್ಭಿಣಿಯರು ಸಾರ್ವತ್ರಿಕ ಲಸಿಕೆಗಳಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳುಬೇಕೆಂದು ತಹಶೀಲ್ದಾರ್ ಪ್ರದೀಪ್ ತಿಳಿಸಿದರು.
ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವತ್ರಿಕ ಲಸಿಕೆ ಹಾಗೂ ಇತರೆ ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಕುರಿತು ದಿ:05-10-2023 ರಂದು ತಹಶೀಲ್ದಾರರ ಕಚೇರಿಯಲ್ಲಿ ಏರ್ಪಡಿಸಲಾಗದ್ದ ತಾಲ್ಲೂಕು ಟಾಸ್ಕ್ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ತೀವ್ರತರ ಮಿಷನ್ ಇಂದ್ರಧನುμï ಅಭಿಯಾನ 3 ಸುತ್ತುಗಳಲ್ಲಿ ನಡೆಯುತ್ತಿದ್ದು, ಈಗಾಗಲೇ 2 ಸುತ್ತು ಆಗಿದೆ. ಈ ಲಸಿಕೆಗಳನ್ನು ಕಾಲ ಕಾಲಕ್ಕೆ ಪಡೆಯದೇ ವಂಚಿತರಾದ 0 ಯಿಂದ 5 ವರ್ಷದೊಳಗಿನ ಮಕ್ಕಳನ್ನು ಹಾಗೂ ಗರ್ಭಿಣಿ ಸ್ತ್ರೀಯರನ್ನು ಗುರಿಯಾಗಿಸಿಕೊಂಡು 2 ಸುತ್ತುಗಳಲ್ಲಿ ಬಿಟ್ಟು ಹೋದ ಲಸಿಕೆಗಳನ್ನು ಪೂರ್ಣಗೊಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಸಾರ್ವತ್ರಿಕ ಲಸಿಕೆಯೊಂದಿಗೆ ಇತರೆ ಆರೋಗ್ಯ ಇಲಾಖೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
Health Department ಶಿವಮೊಗ್ಗ ತಾಲ್ಲೂಕು ವೈದ್ಯಾಧಿಕರಿ ಡಾ.ಚಂದ್ರಶೇಖರ್ ತೀವ್ರತರ ಇಂಧ್ರಧನು ಅಭಿಯಾನವು ಮಕ್ಕಳು ಮತ್ತು ಗರ್ಭಿಣಿಯರಿಗೆ ಸಂಪೂರ್ಣ ರೋಗನಿರೋಧಕವನ್ನು ಒದಗಿಸುವ ಉದ್ದೇಶವನ್ನು ಹೊಂದಿದ್ದು, 2ನೇ ಸುತ್ತಿನಲ್ಲಿ ತಾಲ್ಲೂಕಿನಲ್ಲಿ ಶೇ.100 ಲಸಿಕಾಕರಣ ಆಗಿದೆ.
3 ನೇ ಸುತ್ತಿನ ಲಸಿಕಾ ಅಭಿಯಾನ ಅಕ್ಟೋಬರ್ 9 ರಿಂದ 14 ರವರೆಗೆ ನಡೆಯಲಿದೆ. ಈ ಸುತ್ತುಗಳಲ್ಲಿ ಲಸಿಕಾ ವಂಚಿತರಾದ ಮಕ್ಕಳು ಮತ್ತು ಗರ್ಭಿಣಿಯರು ಲಸಿಕೆಗಳನ್ನು ಪಡೆಯಬೇಕು. ಹಾಗೂ ಮೀಸಲ್ಸ್ ರುಬೆಲ್ಲಾ ನಿರ್ಮೂಲನೆಗೆ ಸಹಕರಿಸಬೇಕೆಂದರು.
ಆರ್ಬಿಎಸ್ಕೆ ಯೋಜನೆಯಡಿ ತಾಲ್ಲೂಕು ವ್ಯಾಪ್ತಿಯ ಅಂಗನವಾಡಿಗಳಲ್ಲಿ ಶೇ.100 ರಷ್ಟು ಮತ್ತು ಶಾಲೆ-ಕಾಲೇಜುಗಳಲ್ಲಿ ಇದುವರೆಗೂ ಶೇ.63 ರಷ್ಟು ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆದಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಆರೋಗ್ಯ ನಿರೀಕ್ಷಕರು, ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.