Sunday, May 17, 2026
Sunday, May 17, 2026

Rotary Organization ನಿರಂತರ ಶ್ರಮದಿಂದ ಒಳ್ಳೆಯ ಕಲಾವಿದರಾಗಲು ಸಾಧ್ಯ- ಶೃತಿ ರಾಘವೇಂದ್ರನ್

Date:

Rotary Organization ಪಾಶ್ಚಿಮಾತ್ಯ ಕಲೆಯಿಂದ ದೇಶಿಯ ಸಂಗೀತ ಕಲೆಯ ಕಲಿಕೆಯ ಸಂಖ್ಯೆಯು ಕಡಿಮೆ ಆಗುತ್ತಿದೆ ಎಂದು ಬೆಂಗಳೂರಿನ ಶೃತಿ ಲಯ ಸಂಸ್ಥೆಯ ಸಂಗೀತ ಗುರು, ಆಕಾಶವಾಣಿ ಚಲನಚಿತ್ರ ಹಿನ್ನೆಲೆ ಗಾಯಕಿ ಶೃತಿ ರಾಘವೇಂದ್ರನ್ ಅಭಿಪ್ರಾಯ ವ್ಯಕ್ತಪಡಿಸಿದರು.

ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಆಧುನಿಕ ಪ್ರಪಂಚದಲ್ಲಿ ಮಕ್ಕಳಿಗೆ ಕೂಡಲೇ ಹಾಡು ಹೇಳಲು ಬರಬೇಕು. ಬೇಗ ವೇದಿಕೆ ಸಿಗುವಂತೆ ಆಗಬೇಕು. ಟಿವಿಯಲ್ಲಿ ಬರಬೇಕು ಎಂಬ ಆಲೋಚನೆ ಇದೆ. ಆದರೆ ಪಾಶ್ಚಿಮಾತ್ಯ ಕಲೆಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿರುವುದರಿಂದ ದೇಶಿಯ ಸಂಗೀತ ಕಲೆ ಕಲಿಕೆಯು ಕುಂಠಿತವಾಗುತ್ತಿದೆ ಎಂದು ತಿಳಿಸಿದರು.

ಸಂಗೀತಕ್ಕೆ ತನ್ನದೇ ಆದ ಶಾಸ್ತ್ರೀಯ ಸ್ಥಾನಮಾನಗಳಿದ್ದು, ಗುರುಗಳಿಂದ ಕಲಿತ ವಿದ್ಯೆಯು ಶಾಶ್ವತ ಆಗಿರುತ್ತದೆ. ಶ್ರದ್ಧೆ, ಏಕಾಗ್ರತೆ ಹಾಗೂ ಇಚ್ಛಾಶಕ್ತಿಯಿಂದ ಕಲಿಯಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ವಿಶೇಷ ಸಾಧನೆ ಮಾಡಿ ಸಂಗೀತ ಸಾಧಕರಿದ್ದಾರೆ. ನಾನು ಸಹ ಶಿವಮೊಗ್ಗದವಳು ಎನ್ನಲು ಹೆಮ್ಮೆ ಎಂದರು.

ಮಕ್ಕಳು ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಬೇಕು. ಧ್ವನಿ ಸಂಸ್ಕರಣೆ ಆಗಬೇಕು. ಒಳ್ಳೆಯ ಸಂಗೀತ ಗುರುವಿನಿಂದ ಅಭ್ಯಾಸ ಮಾಡಬೇಕು. ಒಳ್ಳೆಯ ಕಲಾವಿದರಾಗಲು ನಿರಂತರ ಪರಿಶ್ರಮ ವಹಿಸಿ ಕೆಲಸ ಮಾಡಬೇಕು. ನಂತರ ಉತ್ತಮ ಕಲಾವಿದರಾಗಿ ರೂಪುಗೊಳ್ಳಲಬಹುದಾಗಿದೆ ಎಂದು ಹೇಳಿದರು.

Rotary Organization ನಿರೂಪಕ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಸಂಗೀತದಿAದ ಖಿನ್ನತೆ ದೂರವಾಗುತ್ತದೆ, ಮನಸ್ಸಿಗೆ ಸಂತೋಷವಾಗುತ್ತದೆ. ಸಂಗೀತ ಸಾಧಕನ ಸ್ವತ್ತು, ಕಲೆ ಮನುಷ್ಯನಿಗೆ ಬೆಲೆ ತರುತ್ತದೆ. ಈ ನಿಟ್ಟಿನಲ್ಲಿ ನಮ್ಮ ಊರಿನ ಪ್ರತಿಭೆ ಉನ್ನತ ಮಟ್ಟಕ್ಕೆ ಬೆಳೆದು ನಮ್ಮ ಜಿಲ್ಲೆಗೆ ಹೆಮ್ಮೆ ತಂದಿರುತ್ತಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರೋಟರಿ ಸಂಸ್ಥೆ ವತಿಯಿಂದ ಶೃತಿ ರಾಘವೇಂದ್ರನ್ ಅವರಿಗೆ ಆತ್ಮೀಯವಾಗಿ ಅಭಿನಂದಿಸಲಾಯಿತು. ರೋಟರಿ ಮಿಡ್‌ಟೌನ್ ಸದಸ್ಯ ಜಿ.ಎನ್.ಎನ್.ಮೂರ್ತಿ, ಅನುರಾಧಾ ಮೂರ್ತಿ, ನಮ್ಮ ಟಿವಿಯ ಶ್ರೀಕಾಂತ್, ಸುಪ್ರಿಯಾ ಗೌತಮಿ ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...