Monday, December 15, 2025
Monday, December 15, 2025

Chikmagalur Urban Development Authority ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಆಧ್ಯಕ್ಷರನ್ನಾಗಿ ದಲಿತರೊಬ್ಬರಿಗೆ ಅವಕಾಶ ನೀಡಲು ಒತ್ತಾಯ

Date:

Chikmagalur Urban Development Authority ಚಿಕ್ಕಮಗಳೂರು ನಗರಾಭಿವೃಧ್ದಿ ಪ್ರಾಧಿಕಾರ ಅಧ್ಯಕ್ಷ ಆಯ್ಕೆ ವಿಚಾರದಲ್ಲಿ ಸಾಮಾಜಿಕ ನ್ಯಾಯ ಕಲ್ಪಿಸುವ ಮೂಲಕ ಸೂಕ್ತ ವ್ಯಕ್ತಿಯನ್ನು ಆಯ್ಕೆಗೊಳಿಸಲು ಮುಂದಾಗಬೇಕು ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಂಯೋಜಕ ಹಿರೇಮಗಳೂರು ರಾಮಚಂದ್ರ ಒತ್ತಾಯಿಸಿದರು.

ಈ ಸಂಬಂಧ ಬೆಂಗಳೂರಿನ ಡಿ.ಕೆ.ಶಿ. ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಣೆ ಹಾಗೂ ಪಕ್ಷನಿಷ್ಟೆಯಿಂದ ಇರುವಂತಹ ವ್ಯಕ್ತಿ ಗಳನ್ನು ಸಿಡಿಎ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಳಿಸಬೇಕು ಎಂದು ಆಗ್ರಹಿಸಿದರು.

ಬಳಿಕ ಮಾತನಾಡಿದ ಹಿರೇಮಗಳೂರು ರಾಮಚಂದ್ರ, ಕಳೆದ ಮೂರು ದಶಕಗಳ ಹೆಚ್ಚು ಕಾಲ ಪಕ್ಷದಲ್ಲಿ ಹಲವಾರು ಜನಪರ ಹೋರಾಟಗಳಲ್ಲಿ ಭಾಗಿಯಾಗಿ ಸಾಮಾಜಿಕ ನ್ಯಾಯದ ವಿರುದ್ಧ ಹೋರಾಟ ಮಾಡಿಕೊಂಡು ಬರಲಾಗಿದೆ. ಪಕ್ಷ ಸೂಚಿಸಿದ ಸಭೆ, ಸಮಾರಂಭ ಹಾಗೂ ಇನ್ನಿತರ ಕಾರ್ಯಚಟುವಟಿಕೆಗಳಲ್ಲಿ ಬೂತ್‌ಮಟ್ಟದಿಂದ ಕಾರ್ಯನಿರ್ವಹಿಸಿದ ತಮಗೆ ಸಿಡಿಎ ಅಧ್ಯಕ್ಷ ಸ್ಥಾನ ಒದಗಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಈಗಾಗಲೇ ಚಿಕ್ಕಮಗಳೂರು ಸಿಡಿಎ ಅಧ್ಯಕ್ಷ ಸ್ಥಾನವನ್ನು ದಲಿತ ಸಮುದಾಯ ಹೊರತುಪಡಿಸಿ ಎಲ್ಲಾ ಜನಾಂ ಗಕ್ಕೂ ನೀಡಲಾಗಿದೆ. ಪಕ್ಷದಲ್ಲಿ ಈ ಹಿಂದಿನ ಸಮಯದಲ್ಲಿ ದಲಿತ ಸಮುದಾಯಕ್ಕೂ ಜಿಲ್ಲೆಯಲ್ಲಿ ಉನ್ನತ ಸ್ಥಾನ ಲಭಿಸಿಲ್ಲ. ಆ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದಿದ್ದರು. ಇದೀಗ ಸಿಡಿಎ ಅಧ್ಯಕ್ಷ ಸ್ಥಾನವನ್ನು ದಲಿತ ಸಮುದಾಯಕ್ಕೆ ನೀಡಿದ್ದಲ್ಲಿ ಜನಾಂಗವನ್ನು ಸಹಕರಿಸಿದಂತಾಗಿದೆ ಎಂದಿದ್ದಾರೆ.

Chikmagalur Urban Development Authority ಆ ನಿಟ್ಟಿನಲ್ಲಿ ರಾಜ್ಯಸರ್ಕಾರ ಇಂದಿನ ಅವಧಿಯಲ್ಲಾದರೂ ಜಿಲ್ಲೆಯಲ್ಲಿ ಸಿಡಿಎ ಅಧ್ಯಕ್ಷ ಸ್ಥಾನವನ್ನು ಪಕ್ಷದಲ್ಲಿ ಹಲವಾರು ವರ್ಷಗಳ ದುಡಿದಿರುವ ತಮಗೆ ಅವಕಾಶ ಮಾಡಿಕೊಟ್ಟಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಹಾಗೂ ಸಮು ದಾಯ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ತಿಳಿಸಿದ್ದಾರೆ.
ಬಳಿಕ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಬಿ.ಎಲ್.ಶಂಕರ್ ಹಾಗೂ ಶಾಸಕ ಹೆಚ್.ಡಿ.ತಮ್ಮಯ್ಯನವರ ಜೊತೆ ಚರ್ಚಿಸುವ ಮೂಲಕ ಸಿಡಿಎ ಸ್ಥಾನವನ್ನು ಸಮುದಾಯಕ್ಕೆ ಒದಗಿಸಲು ಶ್ರಮಿಸಲಾ ಗುವುದು ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...