Monday, December 15, 2025
Monday, December 15, 2025

Shivamogga Police ಜಿಲ್ಲೆಯ ವಿವಿಧೆಡೆ ಪಟಾಕಿ ಮಾರಾಟ ಮಳಿಗೆಗಳ ಸುರಕ್ಷತಾ ಪರಿಶೀಲನೆ ಆರಂಭ

Date:

Shivamogga Police ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಈ ದಿನ ದಿನಾಂಕಃ 11-10-2023 ರಂದು ಶ್ರೀ ಸೆಲ್ವಮಣಿ, ಐಎಎಸ್, ಮಾನ್ಯ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ, ಮತ್ತು ಶ್ರೀ ಮಿಥುನ್ ಕುಮಾರ್, ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಸೂಚನೆಯ ಮೇರೆಗೆ, ಶಿವಮೊಗ್ಗ-ಎ ಉಪ ವಿಭಾಗದಲ್ಲಿ ಶ್ರೀ ಬಾಲರಾಜ್, ಡಿವೈಎಸ್ ಪಿ, ಶಿವಮೊಗ್ಗ-ಬಿ ಉಪ ವಿಭಾಗದಲ್ಲಿ ಶ್ರೀ ಸುರೇಶ್ ಎಂ, ಡಿವೈಎಸ್ ಪಿ, ಭದ್ರಾವತಿ ಉಪ ವಿಭಾಗದಲ್ಲಿ ಶ್ರೀ ನಾಗರಾಜ್, ಡಿವೈಎಸ್ ಪಿ, ಸಾಗರ ಉಪ ವಿಭಾಗದಲ್ಲಿ, ಶ್ರೀ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್, ಡಿವೈಎಸ್ ಪಿ, ಶಿಕಾರಿಪುರ ಉಪ ವಿಭಾಗದಲ್ಲಿ ಶ್ರೀ ಶಿವಾನಂದ್ ಮದರಖಂಡಿ, ಡಿವೈಎಸ್ ಪಿ ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ ಶ್ರೀ ಗಜಾನನ ವಾಮನ ಸುತಾರ, ಡಿವೈಎಸ್ ಪಿ ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಕಂದಾಯ, ಲೋಕೋಪಯೋಗಿ, ಅಗ್ನಿಶಾಮಕ, ಮೆಸ್ಕಾಂ, ಮಹಾನಗರ ಪಾಲಿಕೆ, ನಗರ ಪಾಲಿಕೆ, ತಾಲ್ಲೂಕು ಪಂಚಾಯತಿಯ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಖ ತಂಡಗಳು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸಿದರು.

ಶಿವಮೊಗ್ಗ-ಎ ಉಪ ವಿಭಾಗದಲ್ಲಿ 03, ಶಿವಮೊಗ್ಗ-ಬಿ ಉಪ ವಿಭಾಗದಲ್ಲಿ 03, ಭದ್ರಾವತಿ ಉಪ ವಿಭಾಗದಲ್ಲಿ 21, ಸಾಗರ ಉಪ ವಿಭಾಗದಲ್ಲಿ 09, ಶಿಕಾರಿಪುರ ಉಪ ವಿಭಾಗದಲ್ಲಿ 20, ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ 07 ಸೇರಿ ಜಿಲ್ಲೆಯಾದ್ಯಂತ ಒಟ್ಟು 63 ಮಳಿಗೆ ಮತ್ತು ಗೋದಾಮುಗಳಲ್ಲಿ ಪಟಾಕಿ ಸಂಗ್ರಹ ಮತ್ತು ಮಾರಾಟಕ್ಕೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಮತ್ತು ಪರವಾನಿಗೆ ಪಡೆದಿರುವ ಬಗ್ಗೆ, ಮಳಿಗೆ ಹಾಗೂ ಗೋದಾಮುಗಳಲ್ಲಿ ಎಲ್ಲಾ ಅವಶ್ಯಕ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತಿರುವ ಬಗ್ಗೆ ಮತ್ತು ಪಟಾಕಿ ಮಾರಾಟ ಮಾಡಲು ನಿರ್ಮಿಸಿರುವ ಮಳಿಗೆಗಳು ಸುರಕ್ಷತಾ ದೃಷ್ಠಿಯಿಂದ ಸೂಕ್ತವಿರುವ ಬಗ್ಗೆ ಪರಿಶೀಲನೆ ನಡೆಸಿದರು.

Shivamogga Police ನಿಯಮ ಉಲ್ಲಂಘನೆ ಮಾಡಿ, ಪಟಾಕಿಗಳನ್ನು ಸಂಗ್ರಹಿಸಿಟ್ಟಿದ್ದ ಮತ್ತು ಮಾರಾಟ ಮಾಡುತ್ತಿದ್ದ ಮಳಿಗೆ / ಗೋದಾಮಿನ ಮಾಲೀಕರ ವಿರುದ್ಧ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ 01, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 01 , ವಿನೋಬನಗರ ಪೊಲೀಸ್ ಠಾಣೆಯಲ್ಲಿ 01 ಮತ್ತು ಕೋಟೆ ಪೊಲೀಸ್ ಠಾಣೆಯಲ್ಲಿ 01 ಪ್ರರಕಣ ಸೇರಿದಂತೆ ಒಟ್ಟು 04 ಪ್ರಕರಣಗಳನ್ನು ದಾಖಲಿಸಿ, ಅಂದಾಜು 2,000 ಕೆ.ಜಿ ತೂಕದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...