Sunday, December 14, 2025
Sunday, December 14, 2025

DC Shivamogga ಶುಂಠಿ ಬೆಳೆಗೆ ಹೊದಿಕೆಯಾಗಿ ಒಣಹುಲ್ಲು ಬದಲಿಗೆ ಬೇರೆ ವಸ್ತು ಬಳಸಲು ಡೀಸಿ ಅವರ ಸೂಚನೆ

Date:

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಶುಂಠಿ ಬೆಳೆಗೆ ಹೊದಿಕೆಗಾಗಿ ಒಣ ಹುಲ್ಲನ್ನು ಬಳಸುವುದು ಹೆಚ್ಚುತ್ತಿರುವುದರಿಂದ ಜಾನುವಾರುಗಳಿಗೆ ಒಣ ಮೇವಿನ ಕೊರತೆ ಉಂಟಾಗುವ ಸಂಭವ ಇದೆ. ಆದ್ದರಿಂದ ಒಣಹುಲ್ಲಿಗೆ ಬದಲಾಗಿ ಪರ್ಯಾಯ ವಸ್ತುಗಳನ್ನು ಬಳಸುವಂತೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ತೋಟಗಾರಿಕೆ ಬೆಳೆ ಕ್ಷೇತ್ರ ಹೆಚ್ಚಾಗುತ್ತಿದ್ದು, ಭತ್ತ ಮತ್ತು ಇನ್ನಿತರೆ ಧಾನ್ಯಗಳ ಕ್ಷೇತ್ರ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಪ್ರಸ್ತುತ ಶಿವಮೊಗ್ಗ ಜಿಲ್ಲೆಯಾದ್ಯಂತ ವಾಣಿಜ್ಯ ಬೆಳೆಯಾದ ಶುಂಠಿ ಬೆಳೆಯಲ್ಲಿ ಹೊದಿಕೆಗಾಗಿ ಒಣಹುಲ್ಲನ್ನು ಬಳಸುವುದು ಹೆಚ್ಚಾಗುತ್ತಿದೆ. ಇದರಿಂದ ರೈತರ ಜಾನುವಾರುಗಳಿಗೆ ಒಣಮೇವಿನ ಕೊರತೆ ಉಂಟಾಗುವ ಸಂಭವವಿರುವುದರಿಂದ ಹೈನುಗಾರಿಕೆಯನ್ನೇ ಅವಲಂಬಿಸಿ ಜೀವನೋಪಾಯ ನಡೆಸುತ್ತಿರುವ ರೈತಾಪಿ ಕುಟುಂಬದ ಜಾನುವಾರುಗಳಿಗೆ ಒಣ ಮೇವಿನ ಲಭ್ಯತೆ ಕಡಿಮೆಯಾಗಿ ಒಣ ಮೇವಿನ ದರ ಹೆಚ್ಚಾಗುವುದರಿಂದ ಆರ್ಥಿಕ ಹೊರೆಯಾಗುತ್ತಿದೆ.

DC Shivamogga ಈ ಕಾರಣದಿಂದಾಗಿ ಜಿಲ್ಲೆಯಾದ್ಯಂತ ವಾಣಿಜ್ಯ ಬೆಳೆಯಾದ ಶುಂಠಿ ಬೆಳೆಯಲ್ಲಿ ಹೊದಿಕೆಗಾಗಿ ಒಣಹುಲ್ಲನ್ನು ಬಳಸುವುದನ್ನು ನಿಯಂತ್ರಿಸಿ ಪರ್ಯಾಯವಾಗಿ ಅಡಿಕೆ ಗರಿಗಳು/ ಕಾಡಿನಲ್ಲಿ ಸಿಗುವ ದರಗಲೆ/ ಇತ್ಯಾದಿ ಜಾನುವಾರುಗಳ ಮೇವಿಗೆ ಯೋಗ್ಯವಲ್ಲದ ಪದಾರ್ಥಗಳನ್ನು ಹೊದಿಕೆಗಾಗಿ ಬಳಸಲು ಜಿಲ್ಲೆಯ ಶುಂಠಿ ಬೆಳೆಗಾರ ರೈತರಲ್ಲಿ ಕೋರಲಾಗಿದೆ. ಹಾಗೂ ಜಿಲ್ಲೆಯ ರೈತ ಬಾಂಧವರು ತಮ್ಮ ಜಾನುವಾರುಗಳಿಗೆ ಅಗತ್ಯವಿರುವ ಪ್ರಮಾಣದಲ್ಲಿ ಒಣ ಮೇವು ಸಂಗ್ರಹಿಸಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...