Saturday, March 21, 2026
Saturday, March 21, 2026

DC Shivamogga ಶುಂಠಿ ಬೆಳೆಗೆ ಹೊದಿಕೆಯಾಗಿ ಒಣಹುಲ್ಲು ಬದಲಿಗೆ ಬೇರೆ ವಸ್ತು ಬಳಸಲು ಡೀಸಿ ಅವರ ಸೂಚನೆ

Date:

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಶುಂಠಿ ಬೆಳೆಗೆ ಹೊದಿಕೆಗಾಗಿ ಒಣ ಹುಲ್ಲನ್ನು ಬಳಸುವುದು ಹೆಚ್ಚುತ್ತಿರುವುದರಿಂದ ಜಾನುವಾರುಗಳಿಗೆ ಒಣ ಮೇವಿನ ಕೊರತೆ ಉಂಟಾಗುವ ಸಂಭವ ಇದೆ. ಆದ್ದರಿಂದ ಒಣಹುಲ್ಲಿಗೆ ಬದಲಾಗಿ ಪರ್ಯಾಯ ವಸ್ತುಗಳನ್ನು ಬಳಸುವಂತೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ತೋಟಗಾರಿಕೆ ಬೆಳೆ ಕ್ಷೇತ್ರ ಹೆಚ್ಚಾಗುತ್ತಿದ್ದು, ಭತ್ತ ಮತ್ತು ಇನ್ನಿತರೆ ಧಾನ್ಯಗಳ ಕ್ಷೇತ್ರ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಪ್ರಸ್ತುತ ಶಿವಮೊಗ್ಗ ಜಿಲ್ಲೆಯಾದ್ಯಂತ ವಾಣಿಜ್ಯ ಬೆಳೆಯಾದ ಶುಂಠಿ ಬೆಳೆಯಲ್ಲಿ ಹೊದಿಕೆಗಾಗಿ ಒಣಹುಲ್ಲನ್ನು ಬಳಸುವುದು ಹೆಚ್ಚಾಗುತ್ತಿದೆ. ಇದರಿಂದ ರೈತರ ಜಾನುವಾರುಗಳಿಗೆ ಒಣಮೇವಿನ ಕೊರತೆ ಉಂಟಾಗುವ ಸಂಭವವಿರುವುದರಿಂದ ಹೈನುಗಾರಿಕೆಯನ್ನೇ ಅವಲಂಬಿಸಿ ಜೀವನೋಪಾಯ ನಡೆಸುತ್ತಿರುವ ರೈತಾಪಿ ಕುಟುಂಬದ ಜಾನುವಾರುಗಳಿಗೆ ಒಣ ಮೇವಿನ ಲಭ್ಯತೆ ಕಡಿಮೆಯಾಗಿ ಒಣ ಮೇವಿನ ದರ ಹೆಚ್ಚಾಗುವುದರಿಂದ ಆರ್ಥಿಕ ಹೊರೆಯಾಗುತ್ತಿದೆ.

DC Shivamogga ಈ ಕಾರಣದಿಂದಾಗಿ ಜಿಲ್ಲೆಯಾದ್ಯಂತ ವಾಣಿಜ್ಯ ಬೆಳೆಯಾದ ಶುಂಠಿ ಬೆಳೆಯಲ್ಲಿ ಹೊದಿಕೆಗಾಗಿ ಒಣಹುಲ್ಲನ್ನು ಬಳಸುವುದನ್ನು ನಿಯಂತ್ರಿಸಿ ಪರ್ಯಾಯವಾಗಿ ಅಡಿಕೆ ಗರಿಗಳು/ ಕಾಡಿನಲ್ಲಿ ಸಿಗುವ ದರಗಲೆ/ ಇತ್ಯಾದಿ ಜಾನುವಾರುಗಳ ಮೇವಿಗೆ ಯೋಗ್ಯವಲ್ಲದ ಪದಾರ್ಥಗಳನ್ನು ಹೊದಿಕೆಗಾಗಿ ಬಳಸಲು ಜಿಲ್ಲೆಯ ಶುಂಠಿ ಬೆಳೆಗಾರ ರೈತರಲ್ಲಿ ಕೋರಲಾಗಿದೆ. ಹಾಗೂ ಜಿಲ್ಲೆಯ ರೈತ ಬಾಂಧವರು ತಮ್ಮ ಜಾನುವಾರುಗಳಿಗೆ ಅಗತ್ಯವಿರುವ ಪ್ರಮಾಣದಲ್ಲಿ ಒಣ ಮೇವು ಸಂಗ್ರಹಿಸಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...