Sunday, August 2, 2026
Sunday, August 2, 2026

DC Shivamogga ಶುಂಠಿ ಬೆಳೆಗೆ ಹೊದಿಕೆಯಾಗಿ ಒಣಹುಲ್ಲು ಬದಲಿಗೆ ಬೇರೆ ವಸ್ತು ಬಳಸಲು ಡೀಸಿ ಅವರ ಸೂಚನೆ

Date:

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಶುಂಠಿ ಬೆಳೆಗೆ ಹೊದಿಕೆಗಾಗಿ ಒಣ ಹುಲ್ಲನ್ನು ಬಳಸುವುದು ಹೆಚ್ಚುತ್ತಿರುವುದರಿಂದ ಜಾನುವಾರುಗಳಿಗೆ ಒಣ ಮೇವಿನ ಕೊರತೆ ಉಂಟಾಗುವ ಸಂಭವ ಇದೆ. ಆದ್ದರಿಂದ ಒಣಹುಲ್ಲಿಗೆ ಬದಲಾಗಿ ಪರ್ಯಾಯ ವಸ್ತುಗಳನ್ನು ಬಳಸುವಂತೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ತೋಟಗಾರಿಕೆ ಬೆಳೆ ಕ್ಷೇತ್ರ ಹೆಚ್ಚಾಗುತ್ತಿದ್ದು, ಭತ್ತ ಮತ್ತು ಇನ್ನಿತರೆ ಧಾನ್ಯಗಳ ಕ್ಷೇತ್ರ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಪ್ರಸ್ತುತ ಶಿವಮೊಗ್ಗ ಜಿಲ್ಲೆಯಾದ್ಯಂತ ವಾಣಿಜ್ಯ ಬೆಳೆಯಾದ ಶುಂಠಿ ಬೆಳೆಯಲ್ಲಿ ಹೊದಿಕೆಗಾಗಿ ಒಣಹುಲ್ಲನ್ನು ಬಳಸುವುದು ಹೆಚ್ಚಾಗುತ್ತಿದೆ. ಇದರಿಂದ ರೈತರ ಜಾನುವಾರುಗಳಿಗೆ ಒಣಮೇವಿನ ಕೊರತೆ ಉಂಟಾಗುವ ಸಂಭವವಿರುವುದರಿಂದ ಹೈನುಗಾರಿಕೆಯನ್ನೇ ಅವಲಂಬಿಸಿ ಜೀವನೋಪಾಯ ನಡೆಸುತ್ತಿರುವ ರೈತಾಪಿ ಕುಟುಂಬದ ಜಾನುವಾರುಗಳಿಗೆ ಒಣ ಮೇವಿನ ಲಭ್ಯತೆ ಕಡಿಮೆಯಾಗಿ ಒಣ ಮೇವಿನ ದರ ಹೆಚ್ಚಾಗುವುದರಿಂದ ಆರ್ಥಿಕ ಹೊರೆಯಾಗುತ್ತಿದೆ.

DC Shivamogga ಈ ಕಾರಣದಿಂದಾಗಿ ಜಿಲ್ಲೆಯಾದ್ಯಂತ ವಾಣಿಜ್ಯ ಬೆಳೆಯಾದ ಶುಂಠಿ ಬೆಳೆಯಲ್ಲಿ ಹೊದಿಕೆಗಾಗಿ ಒಣಹುಲ್ಲನ್ನು ಬಳಸುವುದನ್ನು ನಿಯಂತ್ರಿಸಿ ಪರ್ಯಾಯವಾಗಿ ಅಡಿಕೆ ಗರಿಗಳು/ ಕಾಡಿನಲ್ಲಿ ಸಿಗುವ ದರಗಲೆ/ ಇತ್ಯಾದಿ ಜಾನುವಾರುಗಳ ಮೇವಿಗೆ ಯೋಗ್ಯವಲ್ಲದ ಪದಾರ್ಥಗಳನ್ನು ಹೊದಿಕೆಗಾಗಿ ಬಳಸಲು ಜಿಲ್ಲೆಯ ಶುಂಠಿ ಬೆಳೆಗಾರ ರೈತರಲ್ಲಿ ಕೋರಲಾಗಿದೆ. ಹಾಗೂ ಜಿಲ್ಲೆಯ ರೈತ ಬಾಂಧವರು ತಮ್ಮ ಜಾನುವಾರುಗಳಿಗೆ ಅಗತ್ಯವಿರುವ ಪ್ರಮಾಣದಲ್ಲಿ ಒಣ ಮೇವು ಸಂಗ್ರಹಿಸಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...