Monday, February 2, 2026
Monday, February 2, 2026

Heavy and medium industrial Department ರಾಜ್ಯದಲ್ಲಿ 200 ಜರ್ಮನ್ ಕಂಪನಿಗಳು ನೆಲೆಗೊಂಡಿವೆ ಕರ್ನಾಟಕ- ಜರ್ಮನಿ ಬಾಂಧವ್ಯ ಘಟ್ಟಿಗೊಂಡಿದೆ- ಎಂ.ಬಿ.ಪಾಟೀಲ್

Date:

Heavy and medium industrial Department ತಯಾರಿಕಾ ವಲಯವಾಗಿ ಬೆಳೆಯುವ ಗುರಿ ಹೊಂದಿರುವ ಕರ್ನಾಟಕ ಸರ್ಕಾರವು ಜರ್ಮನಿ ಕಂಪನಿಗಳಿಗೆ ಹೆಚ್ಚಿನ ಬೆಂಬಲ ನೀಡಲು ಇತ್ತೀಚೆಗೆ ಹಲವು ಉಪಕ್ರಮಗಳನ್ನು ಜಾರಿಗೊಳಿಸಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಹೇಳಿದರು.

ವಿಡಿಎಂಎ ಮೆಕ್ಯಾನಿಕಲ್ ಎಂಜಿನಿಯರಿಂಗ್ ಸಮಾವೇಶ-2023ರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು ಕರ್ನಾಟಕ ಮತ್ತು ಜರ್ಮನಿ ಮುಂಚಿನಿಂದಲೂ ಸದೃಢ ಕೈಗಾರಿಕಾ ಸಹಭಾಗಿತ್ವ ಹೊಂದಿವೆ ಎಂದರು.

ಮುಖ್ಯವಾಗಿ, ತಯಾರಿಕೆ ಮತ್ತು ತಾಂತ್ರಿಕತೆ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಜರ್ಮನಿ ಸಹಭಾಗಿತ್ವ ಪರಸ್ಪರ ಬೆಳವಣಿಗೆಗೆ ಹೆಚ್ಚಿನ ಕೊಡುಗೆ ನೀಡಿದೆ.

ಜರ್ಮನಿ ಕಂಪನಿಗಳು ರಾಜ್ಯದ ಕೈಗಾರಿಕಾ ಸಾಮರ್ಥ್ಯ ಹೆಚ್ಚಿಸಲು ತಮ್ಮದೇ ಕಾಣಿಕೆ ನೀಡುತ್ತಿವೆ. ವಾಹನೋದ್ಯಮ, ಮೂಲಸೌಕರ್ಯ, ಸ್ಮಾರ್ಟ್ ಸಿಟಿ, ಡಿಜಿಟಲ್ ಪರಿಹಾರಗಳಿಗೆ ಸಂಬಂಧಿಸಿದಂತೆ ಗಮನ ಸೆಳೆಯುವಂತಹ ಕೆಲಸ ಮಾಡುತ್ತಿವೆ ಎಂದು ವಿವರಿಸಿದರು.

ದೇಶದಲ್ಲಿ 1600ಕ್ಕೂ ಹೆಚ್ಚು
ಜರ್ಮನ್ ಕಂಪನಿಗಳು ಕಾರ್ಯಚರಿಸುತ್ತಿದ್ದು ಸುಮಾರು 3 ಲಕ್ಷ ಉದ್ಯೋಗಿಗಳನ್ನು ಸೃಷ್ಟಿಸಿವೆ. ಭಾರತದ ಮಾರುಕಟ್ಟೆಯಲ್ಲಿ ಜರ್ಮನಿ ಜೊತೆ 600ಕ್ಕೂ ಹೆಚ್ಚು ಜಂಟಿ ಸಹಭಾಗಿತ್ವ ಚಾಲ್ತಿಯಲ್ಲಿದೆ. ನಮ್ಮ ಕರ್ನಾಟಕವು ಸುಮಾರು 200 ಜರ್ಮನಿ ಕಂಪನಿಗಳಿಗೆ ನೆಲೆಯಾಗಿದೆ ಎಂದು ಪಾಟೀಲ ಹೇಳಿದರು.

Heavy and medium industrial Department ಬೆಳವಣಿಗೆಗೆ ಪೂರಕವಾದ ನಮ್ಮ ಕೈಗಾರಿಕಾ ಕಾರ್ಯ ನೀತಿ, ವಲಯ ನಿರ್ದಿಷ್ಟ ನೀತಿಗಳು, ಸುಗಮ ವ್ಯಾಪಾರಕ್ಕೆ ಒತ್ತು ಮತ್ತು ಕಾರ್ಮಿಕ ಸುಧಾರಣೆ ಕಾನೂನುಗಳು ಕರ್ನಾಟಕ-ಜರ್ಮನಿ ದ್ವಿಪಕ್ಷೀಯ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್ ಅಕಿಂ ಬುಕಾರ್ಟ್ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...