Monday, December 15, 2025
Monday, December 15, 2025

Rotary Shivamogga East ರೋಟರಿಗೆ ದೇಣಿಗೆ ನೀಡಿ ಸಮಾಜ ಸೇವೆಗೆ ಕೈ ಜೋಡಿಸಿ-ಕೆ.ರವಿ ಕೋಟೋಜಿ

Date:

Rotary Shivamogga East ರೋಟರಿ ಸಂಸ್ಥೆಯು ವಿಶ್ವಾದ್ಯಂತ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದು, ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದೆ. ಮನುಕುಲದ ಸೇವೆಗೆ ರೋಟರಿ ಸಂಸ್ಥೆಯು ಸದಾ ಸಿದ್ಧವಿದೆ ಎಂದು ರೋಟರಿ ವಲಯ 11ರ ಸಹಾಯಕ ಗವರ್ನರ್ ಕೆ.ರವಿ ಕೋಟೋಜಿ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ರೋಟರಿ ದತ್ತಿ ನಿಧಿಗೆ ದೇಣಿಗೆ ನೀಡುವುದರ ಮುಖಾಂತರ ಸಮಾಜ ಸೇವೆಯಲ್ಲಿ ಕೈಜೋಡಿಸಬೇಕು. ಇದರಿಂದ ಹೆಚ್ಚು ಹೆಚ್ಚು ಜನರಿಗೆ ಸೇವಾ ಕಾರ್ಯಗಳನ್ನು ತಲುಪಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ರೋಟರಿ ಫೌಂಡೇಷನ್ ಮುಖಾಂತರ ಈಗಾಗಲೇ ಮಹಾಮಾರಿ ಪೊಲಿಯೋ ಕಾಯಿಲೆಯನ್ನು ನಿರ್ಮೂಲನೆ ಮಾಡಲು ಸಂಪೂರ್ಣ ಶ್ರಮಿಸಲಾಗಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿವಿಧ ಯೋಜನೆಗಳನ್ನು ರೂಪಿಸಿಕೊಂಡು ಅನುಷ್ಠಾನ ಮಾಡುತ್ತಿದೆ. ಪ್ರತಿಯೊಬ್ಬರು ಪ್ರತಿ ವರ್ಷ ರೋಟರಿ ಫೌಂಡೇಷನ್‌ಗೆ ತಪ್ಪದೇ ಕೈಲಾದಷ್ಟು ದೇಣಿಗೆ ನೀಡಬೇಕು ಎಂದರು.

ವಲಯ ಸೇನಾನಿ ಧರ್ಮೇಂದ್ರಸಿಂಗ್ ಬಂಟಿ ಮಾತನಾಡಿ, ಸ್ನೇಹ, ಪ್ರೀತಿ, ಸೇವೆಗೆ ಸ್ಥಾಪಿತವಾದ ರೋಟರಿ ಸಂಸ್ಥೆಯು ವಿಶ್ವಾದ್ಯಂತ 36 ಸಾವಿರ ಕ್ಲಬ್‌ಗಳ 14 ಲಕ್ಷಕ್ಕೂ ಅಧಿಕ ಸದಸ್ಯರ ಮುಖಾಂತರ ಸೇವೆ ಸಲ್ಲಿಸುತ್ತ ಜನರನ್ನು ತಲುಪಿದೆ. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಅತಿ ಹೆಚ್ಚು ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ವಿದ್ಯಾಸಂಸ್ಥೆ ಹಾಗೂ ಚಿತಾಗಾರ ಸೇವೆ ಒದಗಿಸಿದೆ ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ಪ್ರಸ್ತಕ ಸಾಲಿನಲ್ಲಿ ನಿರಂತರವಾಗಿ ವಿಶೇಷ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರ ಸಹಕಾರದಿಂದ ಉತ್ತಮ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

Rotary Shivamogga East ಸಹಾಯಕ ಗವರ್ನರ್ ರವಿ ಕೋಟೋಜಿ, ವಲಯ ಸೇನಾನಿ ಧರ್ಮೇಂದ್ರ ಸಿಂಗ್ ಅವರನ್ನು ಸನ್ಮಾನಿಸಲಾಯಿತು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ವಸಂತ ಹೋಬಳಿದಾರ್, ಡಾ. ಗುಡದಪ್ಪ ಕಸಬಿ, ಶ್ರೀಕಾಂತ್, ನಾಗವೇಣಿ, ಎಸ್.ಸಿ.ರಾಮಚಂದ್ರ, ಕೆ.ಜಿ.ರಾಮಚಂದ್ರರಾವ್, ಆದಿಮೂರ್ತಿ, ಮಂಜುನಾಥ್ ಕದಂ, ಪ್ರದೀಪ ಯಲಿ, ರಮೇಶ್ ಭಟ್, ಹೊಸತೋಟ ಸೂರ್ಯನಾರಾಯಣ, ಡಾ. ಲತಾ ಭರತ್, ಶಶಿಕಾಂತ್ ನಾಡಿಗ್, ದಿವ್ಯಾ ಪ್ರವೀಣ್, ಮಂಜುನಾಥ್ ರಾವ್, ಕಾರ್ಯದರ್ಶಿ ಕಿಶೋರ್ ಕುಮಾರ್, ಗೀತಾ, ಅರುಣ್ ದೀಕ್ಷಿತ್, ಸಂತೋಷ್, ಮುಕುಂದ್‌ಗೌಡ, ಕೃಷ್ಣಮೂರ್ತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...