Thursday, March 19, 2026
Thursday, March 19, 2026

Veeramadkari Nayaka ಮದಕರಿ ನಾಯಕರ ಕಾಲದ ಸಂಸ್ಕೃತಿ,ಸಾಹಿತ್ಯ,ಕಲೆ & ಪುಷ್ಕರಿಣಿಗಳು ಅವಿಸ್ಮರಣೀಯ- ಜಗದೀಶ್ ಕೋಟೆ

Date:

Veeramadkari Nayaka ವೀರಮದಕರಿ ನಾಯಕರ ಆಳ್ವಿಕೆಯಲ್ಲಿ ಗುಡಿ, ಗೋಪುರ, ಕಲ್ಯಾಣ ನಿರ್ಮಿಸಿದ್ದಲ್ಲದೇ ಎಲ್ಲಾ ಸಮುದಾಯದೊಂದಿಗೆ ಸೌಹಾರ್ದಯುತ ಆಳ್ವಿಕೆ ನಡೆಸಿದ ಇತಿಹಾಸವಿದೆ ಎಂದು ಜಿಲ್ಲಾ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘದ ಅಧ್ಯಕ್ಷ ಜಗದೀಶ್ ಕೋಟೆ ಹೇಳಿದರು.

ಚಿಕ್ಕಮಗಳೂರು ನಗರದ ದೋಣದ ಸಮೀಪದ ಸಂಘದ ಕಚೇರಿಯಲ್ಲಿ ವೀರಮದಕರಿ ನಾಯಕರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ಸಂಜೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ರಾಜವೀರ ಮದಕರಿನಾಯಕ ಪಾಳೆಗಾರರಲ್ಲಿ ಸುಭದ್ರ ಆಡಳಿತದೊಂದಿಗೆ ಎಲ್ಲಾ ವರ್ಗದ ಜನತೆಗೆ ಸಮಾನತೆ ಕಲ್ಪಿಸಿದ್ದರು. ಅಲ್ಲದೇ ಅವರ ಆಡಳಿತಾವಧಿಯಲ್ಲಿ ಸಾಂಸ್ಕೃತಿಕ, ಸಾಹಿತ್ಯ, ಕಲೆ ಮತ್ತು ಪುಷ್ಕರಣೆಗಳು ಇಂದಿಗೂ ಅವಿಸ್ಮರಣೀಯ ಎಂದು ತಿಳಿಸಿದರು.

ಮದಕರಿ ನಾಯಕರ ಆಡಳಿತ, ಅವರ ದೈರ್ಯ, ಜನಪರ ಕಾಳಜಿ ನಾವು ತಿಳಿದುಕೊಂಡು ಅವರಿಗೆ ಗೌರವ ಬರುವ ರೀತಿ ನಡೆದುಕೊಳ್ಳಬೇಕು. ಇಂದಿನ ಯುವಪೀಳಿಗೆ ಅವರ ಆದರ್ಶ ಮತ್ತು ತತ್ವಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕಿದೆ ಎಂದು ಸಲಹೆ ಮಾಡಿದರು.

ರಾಜ ವೀರ ಮದಕರಿ ೧೭೪೨ರಂದು ಚಿತ್ರದುರ್ಗದ ಜನಕಲ್ ಎಂಬ ಸ್ಥಳದಲ್ಲಿ ವಾಲ್ಮೀಕಿ ಸಮುದಾಯದಲ್ಲಿ ಜನಿಸಿದರು. ಇತಿಹಾಸದಲ್ಲಿ ಮದಕರಿ ನಾಯಕ ಎಂದೆಂದಿಗೂ ಅಜರಾಮರ. ಇವರ ಶೌರ್ಯ, ಧೈರ್ಯ, ಸಾಹಸ ಅಂತಹದ್ದು, ಚಿತ್ರದುರ್ಗ ನಾಯಕರ ಅಳ್ವಿಕೆಯ ಕೊನೆಯ ಅರಸರಾಗಿದ್ದ ಇವರನ್ನು ಗಂಡುಗಲಿ ಮದಕರಿ ನಾಯಕ, ದುರ್ಗದ ಹುಲಿ ಎಂದು ಹಲವಾರು ಬಿರುದುಗಳಿಂದ ಜನರು ಕರೆಯುತ್ತಿದ್ದರು ಎಂದರು.

Veeramadkari Nayaka ಇದೇ ವೇಳೆ ಅ.೨೮ ರಂದು ನಡೆಯಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಹಾಗೂ ಕ್ರೀಡಾ ಕೂಟ ಆಯೋಜಿಸುವ ಸಂಬಂಧ ಪೂರ್ವಸಿದ್ಧತೆ ಸಭೆಯಲ್ಲಿ ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಜಗದೀಶ್ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಮಧುಕುಮಾರ್, ತಾಲ್ಲೂಕು ಅಧ್ಯಕ್ಷ ಪ್ರದೀಪ್, ಗೌರವ ಅಧ್ಯಕ್ಷ ವಿಜಯ ಕುಮಾರ್, ಪ್ರದಾನ ಕಾರ್ಯದರ್ಶಿ ಯತೀಶ್, ಸಂಚಾಲಕರಾದ ವೀರಪ್ಪ, ಚಂದ್ರು, ಮುಳ್ಳಪ್ಪ, ಜಿಲ್ಲಾ ರಾಜ್ಯ ಪರಿಶಿಷ್ಟ ಪಂಗಡ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಯತೀಶ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...