Monday, February 2, 2026
Monday, February 2, 2026

District Chamber of Commerce ಪ್ರತಿಯೊಬ್ಬರೂ ಸಿರಿಧಾನ್ಯಗಳ ಮಹತ್ವ ಅರಿತು ಬಳಸಬೇಕು- ಚಂದ್ರಹಾಸ ಶೆಟ್ಟಿ

Date:

District Chamber of Commerce ಸಿರಿಧಾನ್ಯಗಳ ಬಗ್ಗೆ ಹೆಚ್ಚು ಅರಿವು ಮೂಡಿಸುವ ಅಗತ್ಯವಿದ್ದು, ಆರೋಗ್ಯ ಸದೃಢತೆ ಕಾಪಾಡಿಕೊಳ್ಳಲು ಸಿರಿಧಾನ್ಯಗಳ ಬಳಕೆ ಸಹಕಾರಿಯಾಗುತ್ತದೆ ಎಂದು ಉದ್ಯಮಿ ಚಂದ್ರಹಾಸ್ ಶೆಟ್ಟಿ ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಿರಿಧಾನ್ಯದಿಂದ ಆಹಾರ ತಯಾರಿಸುವ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳು ಹೆಚ್ಚು ಲಭ್ಯವಿದ್ದು, ಪ್ರತಿಯೊಬ್ಬರು ಸಿರಿಧಾನ್ಯಗಳ ಮಹತ್ವ ಅರಿತುಕೊಂಡು ಬಳಸಬೇಕು ಎಂದು ಸಲಹೆ ನೀಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್ ಮಾತನಾಡಿ, ಸಿರಿಧಾನ್ಯಗಳಿಂದ ಪ್ರತಿ ನಿತ್ಯ ತಿಂಡಿ ತಿನಿಸುವ ಮಾಡಿಕೊಳ್ಳುವ ದೃಷ್ಠಿಯಿಂದ ಸ್ಪರ್ಧೆಯು ಅತ್ಯಂತ ಉಪಯುಕ್ತ ಆಗಿದ್ದು, ಮುಂದಿನ ಪೀಳಿಗೆಗೆ ಸಿರಿಧಾನ್ಯದ ಅಡುಗೆಗಳ ಬಗ್ಗೆ ಹೆಚ್ಚು ಕಲಿಸಿಕೊಡಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಗಣೇಶ ಅಂಗಡಿ ಮಾತನಾಡಿ, 2023ನೇ ವರ್ಷವನ್ನು ವಿಶ್ವ ಸಿರಿಧಾನ್ಯ ವರ್ಷ ಘೋಷಿಸಿರುವ ಹಿನ್ನೆಲೆ ಹಾಗೂ ವಿಶ್ವ ಆಹಾರ ದಿನಾಚರಣೆ ಪ್ರಯುಕ್ತ ಸಂಘದ ವತಿಯಿಂದ ವಿಶೇಷ ಸ್ಪರ್ಧೆ ಹಮ್ಮಿಕೊಂಡು ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ ಎಂದರು.
ರುಚಿ ಶುಚಿಯಾಗಿ ಸಿರಿಧಾನ್ಯ ಆಹಾರ ತಯಾರಿಸುವ ಸ್ಪರ್ಧೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಉತ್ತಮವಾಗಿ ಆಹಾರ ತಯಾರಿಸಿದವರಿಗೆ ಬಹುಮಾನ ವಿತರಿಸಲಾಯಿತು.

District Chamber of Commerce ನಂದಿನಿ ನಾಗರಾಜ್, ಡಾ. ಪಲ್ಲವಿ ಹಾಗೂ ಸೋಮಶೇಖರ್ ತೀರ್ಪುಗಾರರಾಗಿ ಭಾಗವಹಿಸಿದ್ದರು.
ಎಫ್‌ಕೆಸಿಸಿಐ ಮ್ಯಾನೇಜಿಂಗ್ ಕಮಿಟಿ ಸದಸ್ಯ ಡಿ.ಎಂ.ಶಂಕರಪ್ಪ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಸವಿತಾ ಮಾಧವ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...