Thursday, June 18, 2026
Thursday, June 18, 2026

District Chamber of Commerce ಯೋಗ ಕುರಿತ ಸಂಶೋಧನೆಗಳು ಪ್ರಯೋಗಗಳು ಯೋಗದ ಶಕ್ತಿಯನ್ನು ಬೆಳಕಿಗೆ ಬಂದಿವೆ- ಡಾ.ದೇವರಾಜ್

Date:

District Chamber of Commerce ಯೋಗದ ಪ್ರಭಾವ ಜಗದಗಲ ವ್ಯಾಪಿಸಿದ್ದು, ಯೋಗದ ಕುರಿತು ಅನೇಕ ಸಂಶೋಧನೆಗಳು, ಪ್ರಯೋಗಗಳು ಯೋಗದ ಶಕ್ತಿಯನ್ನು ಬೆಳಕಿಗೆ ತಂದಿವೆ ಎಂದು ಬೆಂಗಳೂರಿನ ಯೋಗಿ ಡಾ. ದೇವರಾಜ್ ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವ ಯೋಗ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಶ್ವಸಂಸ್ಥೆಯು ಜೂನ್ 21 ಅನ್ನು ವಿಶ್ವ ಯೋಗ ದಿನಾಚರಣೆ ಎಂದು ಘೋಷಿಸಿದ ನಂತರ ವಿಶ್ವದೆಲ್ಲೆಡೆ ಯೋಗಾಭ್ಯಾಸವನ್ನು ಮಾಡುವವರ ಸಂಖ್ಯೆ ಹಿಂದೆಂದಿಗಿಂತಲೂ ಅಧಿಕವಾಗಿದೆ ಎಂದು ತಿಳಿಸಿದರು.

ನಮಗಿಂತ ಹೆಚ್ಚು ಶ್ರದ್ಧೆಯಿಂದ ವಿದೇಶಿಯರು ಯೋಗವನ್ನು ಜೀವನದ ಅವಿಭಾಜ್ಯ ಅಂಗ ಆಗಿಸಿಕೊಂಡಿದ್ದಾರೆ. ಆದರೆ ಯೋಗದ ತವರಾದ ನಮ್ಮ ದೇಶದಲ್ಲಿ ಯೋಗದ ಬಗ್ಗೆ ಅಭಿಪ್ರಾಯ, ಅರಿವು ಕಡಿಮೆ ಇದೆ. ಈ ನಿಟ್ಟಿನಲ್ಲಿ ಭಾರತೀಯರಾದ ನಮಗೆ ಯೋಗ ಎಂದರೆ ಯೋಗಾಸನ ಮಾತ್ರವಲ್ಲ, ಅದರ ವ್ಯಾಪ್ತಿ ನಮ್ಮ ಊಹೆಗೂ ನಿಲುಕದಷ್ಟು ಎನ್ನುವ ಅರಿವು ಮೂಡಿಸಬೇಕಿದೆ ಎಂದರು.

2023ರ ಡಿಸೆಂಬರ್ 23, 24 ರ ಶನಿವಾರ ಮತ್ತು ಭಾನುವಾರದಂದು ಬೆಂಗಳೂರಿನ ಅರಮನೆಯ ಮೈದಾನದಲ್ಲಿ ನಡೆಯಲಿರುವ ಅಭೂತಪೂರ್ವ ಯೋಗ ಸಮ್ಮೇಳನದಲ್ಲಿ ಪ್ರತಿನಿಧಿಗಳಾಗಿ ಭಾಗವಹಿಸುವುದರ ಮೂಲಕ ಯೋಗದ ಬಗ್ಗೆ ಜ್ಞಾನವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬೇಕು. ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಯೋಗ ಅಭ್ಯಾಸ ಮಾಡಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅಕ್ಯುಪ್ರೆಷರ್ ಥೆರಪಿ ಪರಿಣಿತ ದಕ್ಷಿಣಾ ಮೂರ್ತಿ ಮಾತನಾಡಿ, ನಮ್ಮ ಸುತ್ತ ಮುತ್ತ ಉಚಿತವಾಗಿ ದೊರೆಯುವ ಅಮೃತಬಳ್ಳಿ, ಪಾರಿಜಾತ, ನಿತ್ಯ ಪುಷ್ಪ, ಎಕ್ಕದ ಎಲೆಗಳನ್ನು ಬಳಸಿಕೊಂಡು ಖರ್ಚಿಲ್ಲದೆ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.

District Chamber of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಾದ ಯೋಗ ಫೌಂಡೇಷನ್ ಬೆಲಗೂರು ಮಂಜುನಾಥ್ ವಹಿಸಿದ್ದರು.

ನಂದಿನಿ ನಾಗರಾಜ್ ಅತಿಥಿಗಳ ಪರಿಚಯ ನೆರವೇರಿಸಿದರು. ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ ನಿರೂಪಣೆ ನಡೆಸಿದರು. ಕಾರ್ನಳ್ಳಿ ಮಂಜುನಾಥ್ ಸ್ವಾಗತ, ರಾಜಶೇಖರ ವಂದನಾರ್ಪಣೆ ಮಾಡಿದರು.

ಸಭಾ ಕಾರ್ಯಕ್ರಮದಲ್ಲಿ ಯೋಗ ಶಿಕ್ಷಣ ಸಮಿತಿಯ ಬಾ.ಸು.ಅರವಿಂದ, ಲೋಕೆಶ್, ಶಿವಗಂಗಾ ಯೋಗಕೇಂದ್ರದ ಎ.ಎಸ್ ಚಂದ್ರಶೇಖರ್, ಜಿ.ವಿಜಯಕುಮಾರ್, ಮಧು ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...