Monday, December 15, 2025
Monday, December 15, 2025

Karnataka Rkshana Vedike ಕರವೇ ಕನ್ನಡ ಪರ ಅನೇಕ ಹೋರಾಟಗಳನ್ನ ಮಾಡಿ ಸಫಲವಾಗಿದೆ-ರಮೇಶ್

Date:

Karnataka Rkshana Vedike ಕರ್ನಾಟಕ ರಕ್ಷಣಾ ವೇದಿಕೆಯ ಕಡೂರು ತಾಲ್ಲೂ ಕು ಅಧ್ಯಕ್ಷರಾಗಿ ಎಂ. ಸತೀಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ.ಭರತ್ ಅವರನ್ನು ಆಯ್ಕೆ ಮಾಡ ಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ರಮೇಶ್ ಹೇಳಿದರು.

ಕಡೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಪದಾಧಿಕಾರಿಗಳ ಕಾರ್ಯಕ್ರಮದಲ್ಲಿ ಭಾಗ ವಹಿಸಿ ಮಾತನಾಡಿದ ಅವರು ಕರವೇ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಹಲವಾರು ವರ್ಷಗಳಿಂದ ನಾಡು, ನುಡಿ ರಕ್ಷಣೆ ಯ ವಿಚಾರದಲ್ಲಿ ಪ್ರತಿಯೊಂದಕ್ಕೂ ಸ್ಪಂದಿಸುವುದಲ್ಲದೇ ಅನೇಕ ಹೋರಾಟಗಳಲ್ಲಿ ಭಾಗಿಯಾಗಿ ಕಾರ್ಯನಿರ್ವ ಹಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದ ಗಡಿಯ ವಿಚಾರದಲ್ಲಿ ಮಹಾರಾಷ್ಟçವನ್ನು ವಿರುದ್ಧ ಹೋರಾಟ ಮಾಡಲಾಗಿದೆ. ಕನ್ನಡಿಗರು ಹಿಂದಿ ಯಲ್ಲಿ ಪರೀಕ್ಷೆ ಎದುರಿಸಬೇಕಿದ್ದ ಸಂದರ್ಭದಲ್ಲಿ ಕರವೇಯು ಸ್ಥಳೀಯ ಭಾಷೆ ಕನ್ನಡದಲ್ಲಿ ಪ್ರಶ್ನೆ ಪತ್ರಿಕೆಯನ್ನು ನೀಡುವಂತೆ ಹೋರಾಡಿದ ಪ್ರತಿಫಲ ಇದೀಗ ಕನ್ನಡ ಭಾಷೆಯ ಪ್ರಶ್ನೆ ಪತ್ರಿಕೆಯನ್ನು ಮುದ್ರಿಸಿ ನೀಡಲಾಗುತ್ತಿದೆ ಎಂದರು.

Karnataka Rkshana Vedike ಕಾವೇರು ನೀರು ತಮಿಳುನಾಡಿಗೆ ಹರಿಸುವ ಸಂಬಂಧ ರಾಜ್ಯಾಧ್ಯಕ್ಷ ಪ್ರವೀಣ್‌ಶೆಟ್ಟಿ ಮಾರ್ಗದರ್ಶನದಲ್ಲಿ ಜಿಲ್ಲೆ ಸೇರಿದಂತೆ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ಭಾಗಿಯಾಗಿ ರೈತರ ಹಾಗೂ ನಾಡಿನ ಜನತೆಯ ಪರವಾಗಿ ನಿಲ್ಲಲಾಗಿದೆ. ಜೊತೆಗೆ ಕನ್ನಡ ಭಾಷೆಗೆ ಧಕ್ಕೆ ತಂದ ಬೆಳಗಾವಿ ಮೇಯರ್ ವಿಜಯ ಪಾಂಡುರಂಗ ಮುಖಕ್ಕೆ ಕಪ್ಪು ಬಣ್ಣ ಸುರಿದು ನಾಡಿನ ಪರವಾಗಿ ಹೋರಾಟ ನಡೆಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ಕರವೇ ಉಪಾಧ್ಯಕ್ಷರಾಗಿ ಗೋವಿಂದಪ್ಪ, ಸಂಘಟನಾ ಕಾರ್ಯದರ್ಶಿ ನಾಗರಾಜ್, ರೈತ ಘಟಕದ ಅಧ್ಯಕ್ಷ ಹರ್ಷಿತ್, ಕಾರ್ಯದರ್ಶಿ ರವಿಕುಮಾರ್, ಸದಸ್ಯರಾದ ವೈ.ಜೆ.ಪೃಥ್ವಿ, ಲಕ್ಷಿö್ಮÃಶ, ಪೃಥ್ವಿಕ್, ರೋಹಿತ್, ಪುನೀತ್, ಮಂಜುನಾಥ್ ಮತ್ತಿತರರು ಕರವೇ ತಾಲ್ಲೂಕ ಘಟಕಕ್ಕೆ ಆಯ್ಕೆಗೊಳಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...