Monday, February 2, 2026
Monday, February 2, 2026

Supreme Court ಒಳಚರಂಡಿ ಕಾರ್ಮಿಕರು ಕರ್ತವ್ಯದಲ್ಲಿ ಮೃತಪಟ್ಟರೆ ₹ 30 ಲಕ್ಷ ಪರಿಹಾರ ನೀಡಿ-ಸುಪ್ರೀಂ ಕೋರ್ಟ್

Date:

Supreme Court ಒಳಚರಂಡಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಕಾರ್ಮಿಕರು ಮೃತಪಟ್ಟಿರುವ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಕೆಲಸದ ಸಂದರ್ಭದಲ್ಲಿ ಕಾರ್ಮಿಕರು ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರದ ಪ್ರಾಧಿಕಾರಗಳು 30 ಲಕ್ಷ ರೂಪಾಯಿ ಪರಿಹಾರ ಒದಗಿಸಬೇಕು ಎಂದು ಹೇಳಿದೆ.

ಕಾರ್ಮಿಕರಿಗೆ ಬೇರೆ ಯಾವುದೇ ರೀತಿಯ ಅಂಗವೈಕಲ್ಯ ಉಂಟಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ರೂ. 10 ಲಕ್ಷದವರೆಗೆ ಪರಿಹಾರ ಒದಗಿಸಬೇಕು ಎಂದು ನ್ಯಾಯಮೂರ್ತಿ ಭಟ್‌ ಅವರು ಆದೇಶದಲ್ಲಿ ಹೇಳಿದ್ದಾರೆ. ಒಳಚರಂಡಿ, ಶೌಚಗುಂಡಿ ಇಳಿದು ಕಾರ್ಮಿಕರು ಜೀವ ಕಳೆದುಕೊಳ್ಳುವ ಸಂದಭ ಎದುರಾಗದಂತೆ ಸರ್ಕಾರದ ಸಂಸ್ಥೆಗಳು ಸಮನ್ವಯದಿಂದ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

Supreme Court ಒಳಚರಂಡಿ ಸ್ವಚ್ಛಗೊಳಿಸುವಾಗ ಕಾರ್ಮಿಕರು ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾದಲ್ಲಿ ಅವರಿಗೆ ಕನಿಷ್ಠ 20 ಲಕ್ಷ ಪರಿಹಾರ ನೀಡಬೇಕು ಎಂದು ನ್ಯಾಯಮೂರ್ತಿಗಳಾದ ಎಸ್. ರವೀಂದ್ರ ಭಟ್ ಮತ್ತು ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ಪೀಠವು ಆದೇಶಿಸಿದೆ. ‘ಒಳಚರಂಡಿ, ಶೌಚಗುಂಡಿಯನ್ನು ಬರಿಗೈಯಿಂದ ಸ್ವಚ್ಛಗೊಳಿಸುವ ಪದ್ಧತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ಇಲ್ಲವಾಗಿಸಬೇಕು’ ಎಂದು ತಾಕೀತು ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...