Wednesday, July 8, 2026
Wednesday, July 8, 2026

Department of Social Welfare ದೀಕ್ಷಾ ಭೂಮಿ ಯಾತ್ರಿಕರು ಅಲ್ಲಿನ ಆದರ್ಶಗಳನ್ನೆಲ್ಲರಿಗೂ ತಿಳಿಸಬೇಕು- ಎಚ್.ಡಿ.ತಮ್ಮಯ್ಯ

Date:

Department of Social Welfare ಅಂಬೇಡ್ಕರ್ ದೀಕ್ಷಾಭೂಮಿ ಯಾತ್ರೆಗೆ ತೆರಳುವವರು ಕೇವಲ ಭೇಟಿ ನೀಡಿ ವಾಪಸಾದರೆ ಸಾಲದು. ಅಲ್ಲಿರುವ ಆದರ್ಶಗಳನ್ನು ಪ್ರತಿಯೊಬ್ಬರಲ್ಲೂ ತಿಳಿಸುವ ಕೆಲಸ ಮಾಡಿದರೆ ಪ್ರವಾಸಕ್ಕೆ ನಿಜವಾದ ಅರ್ಥ ಮೂಡಲು ಸಾಧ್ಯ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಾಲ್ಕು ದಿನಗಳ ಕಾಲ ನಾಗಪುರದ ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಏರ್ಪಡಿಸಿದ್ದ ಪ್ರವಾಸಕ್ಕೆ ಭಾನುವಾರ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆಯಿಂದ ಅಪರೂಪದ ಪ್ರವಾಸ ಕಾರ್ಯಕ್ರಮ ಆಯೋಜಿಸಿರುವುದು ಸ್ವಾಗತಾರ್ಹ. ಇದರಿಂದ ಜನರು ಬುದ್ಧನ ಜೀವನ ಚರಿತ್ರೆಯನ್ನು ತಿಳಿಯಲು ಸಾಧ್ಯವಾಗಲಿದೆ. ಬುದ್ಧನ ನಾಡಿಗೆ ಪ್ರವಾಸ ತೆರಳು ವವರು ಬುದ್ಧನ ವಿಚಾರಧಾರೆ ಮತ್ತು ಹಾಕಿಕೊಟ್ಟ ದಾರಿಯಲ್ಲಿಯೇ ಸಾಗಬೇಕು ಎಂದು ತಿಳಿಸಿದರು.

ಗೌತಮ ಬುದ್ಧನ ತತ್ವಗಳನ್ನು ಅಳವಡಿಸಿಕೊಳ್ಳುವ ಕೆಲಸ ಪ್ರತಿಯೊಬ್ಬರು ಮಾಡಬೇಕು. ನಿದ್ದೆಯಿಂದ ಎದ್ದ ವನೇ ಬುದ್ಧ, ಅತಿ ಜಾಗೃತ ಮನಸ್ಸಿನವ, ಜ್ಞಾನಿ ಹಾಗೂ ಬೇರೆಯವರಿಗೆ ನೋವುಂಟು ಮಾಡದವರು ತಮ್ಮ ಇಡೀ ಬದುಕನ್ನು ಸಮಾಜಕ್ಕೆ ಮುಡುಪಾಗಿಟ್ಟವರ ಮಾರ್ಗದರ್ಶನದ ಹಾದಿಯಲ್ಲಿ ಇಂದಿನ ಜನತೆ ಮುಂದುವರೆಯ ಬೇಕು ಸಲಹೆ ಮಾಡಿದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಪ್ರವಾಸದಿಂದ ಜ್ಞಾನಾರ್ಜನೆ ಮಾಡಿಕೊಂಡು ಬುದ್ಧನ ವಿಚಾರಧಾರೆ ಪಸರಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು. ಜೊತೆಗೆ ನೀವುಗಳೇ ಬುದ್ಧನ ಕುರಿತಾದ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್ ಮಾತನಾಡಿ ನಾಗಪುರಕ್ಕೆ ಜಿಲ್ಲೆಯಿಂದ ನಾಲ್ಕು ಬಸ್‌ಗಳಲ್ಲಿ 160 ಮಂದಿ ಪ್ರಯಾಣ ಆರಂಭಿಸಿದ್ದಾರೆ.

Department of Social Welfare ಚಿಕ್ಕಮಗಳೂರು ತಾಲೂಕಿನಿಂದಲೇ ಎರಡು ಬಸ್, ಮೂಡಿಗೆರೆ ಒಂದು ಬಸ್ ಹಾಗೂ ಕೊಪ್ಪ, ಶೃಂಗೇರಿ, ಕಡೂರು, ಅಜ್ಜಂಪುರ, ನರಾಪುರ ಭಾಗದಿಂದ ಒಂದು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಜೊತೆಗೆ ಪ್ರವಾಸಕ್ಕೆ ಹೋಗುವವರೊಂದಿಗೆ ಓರ್ವ ನೋಡಲ್ ಅಧಿಕಾರಿಯನ್ನೂ ನಿಯೋ ಜನೆ ಮಾಡಿ ಕಳುಹಿಸಿಕೊಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಡಿ.ರೇವಣ್ಣ, ದಲಿತ ಮುಖಂಡ ರಾದ ಮರ್ಲೆ ಅಣ್ಣಯ್ಯ, ಆಲ್ದೂರ್ ನವರಾಜ್, ಆಲ್ದೂರ್ ಗಣೇಶ್, ಯಲಗುಡಿಗೆ ಹೊನ್ನಪ್ಪ ಮತ್ತಿತರರು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...