ATNCC College Shivamogga ಶಿವಮೊಗ್ಗ ನಗರದ ಎಟಿಎನ್ಸಿಸಿ ಕಾಲೇಜಿನ ಸಭಾಂಗಣದಲ್ಲಿ `ಸಿಎ ನನ್ನ ಗುರಿ’ ಎಂಬ ವಿಚಾರ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಗಳೂರಿನ ತ್ರಿಶಾ ಸಮುದಾಯ ಸಂಸ್ಥೆಗಳ ಮುಖ್ಯ ಸಚೇತರಾದ ಸಿ.ಎ. ಗೋಪಾಲಕೃಷ್ಣ ಭಟ್ ಉಪನ್ಯಾಸ ನೀಡಿದರು. ಪ್ರಾಂಶುಪಾಲ ಪ್ರೊ. ಪಿ.ಪಿ. ಮಮತ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಕೋಚಿಂಗ್ ಅಕಾಡೆಮಿಯ ನಿರ್ದೇಶಕ ರಮೇಶ್ ಹೆಗಡೆ ಉಪಸ್ಥಿತರಿದ್ದರು.
ATNCC College Shivamogga ನೂರಾರು ಜನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು.