Tuesday, May 26, 2026
Tuesday, May 26, 2026

Dodamma Charitable Trust ದೇವರ ಶಕ್ತಿಯ ಅರಿವಿನಿಂದ ಜೀವನ ಸಾರ್ಥಕ ಶ್ರೀ ಮಾತಾಜಿ ವಿವೇಕಮಯಿ ಆಶೀರ್ವಚನ

Date:

Dodamma Charitable Trust ಭಗವತಿಯ ಅನುಗ್ರಹದಿಂದಲೇ ಜಗತ್ತಿನಲ್ಲಿ ಸತ್ಕಾರ್ಯಗಳು ನಡೆಯುತ್ತಿವೆ. ಹೀಗಾಗಿ ದೇವರ ಶಕ್ತಿಯ ಅರಿವು ಹೊಂದುವ ಮೂಲಕ ಜೀವನ ಸಾರ್ಥಕಪಡಿಸಿಕೊಳ್ಳುವತ್ತ ಚಿಂತನೆ ನಡೆಸಬೇಕು ಎಂದು ಮಾಗಡಿ ಮತ್ತು ಬೆಂಗಳೂರು ಪೋಲೋಹಳ್ಳಿಯ ಶ್ರೀ ಭವತಾರಿಣಿ ಆಶ್ರಮದ ಅಧ್ಯಕ್ಷೆ ಶ್ರೀ ಮಾತಾಜಿ ವಿವೇಕಮಯಿ ಹೇಳಿದರು.

ಸೋಮಿನಕೊಪ್ಪ ಕೆಎಚ್‌ಬಿ ಪ್ರೆಸ್ ಕಾಲನಿಯ ಶ್ರೀ ದೊಡ್ಡಮ್ಮ ಚಾರಿಟಬಲ್ ಟ್ರಸ್ಟ್ಯಿಂದ ಶರನ್ನವರಾತ್ರಿ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಶ್ರೀ ದೊಡ್ಡಮ್ಮ ದೇವಿ ಅನುಗ್ರಹ ರಾಷ್ಟಿಯ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಪಂಚದ ಎಲ್ಲಾ ಆಗುಹೋಗುಗಳಿಗೆ ಭಗವಂತನೇ ಕಾರಣ. ಶ್ರೀ ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದರು ಸೇರಿದಂತೆ ಮಹಾತ್ಮರು ದೇವರ ಶಕ್ತಿ, ಇರುವಿಕೆಯ ಸತ್ಯವನ್ನು ಮೌಲ್ಯಯುತ ಸಂದೇಶಗಳ ಮೂಲಕ ನೀಡಿದ್ದಾರೆ.

ಪ್ರತಿಯೊಬ್ಬರು ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದರು.
ಸಮಾಜಸೇವೆಗೆ ವಿಶೇಷ ಮಾನ್ಯತೆ ಇದೆ. ಸೇವೆಯಿಂದ ಜೀವನದಲ್ಲಿ ನೆಮ್ಮದಿ ಪಡೆಯುವ ಜತೆಗೆ ಬದುಕು ಅರ್ಥಪೂರ್ಣವಾಗುತ್ತದೆ. ಗುಲ್ಬರ್ಗದ ಹಣಮಂತ ದೇವನೂರ ಅವರ ಸೇವೆ ಹಿರಿದು. ಇಂತಹವರ ಕಾರ್ಯ ಎಲ್ಲರಿಗೂ ಆದರ್ಶ, ಪ್ರೇರಣೆಯಾಗಿದೆ. ಸತ್ಕಾರ್ಯಗಳನ್ನು ಗುರುತಿಸಿ ಗೌರವಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಕುಷ್ಠರೋಗಿಗಳಿಗೆ ವಿಶೇಷ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಶ್ರೀ ದೊಡ್ಡಮ್ಮದೇವಿ ಅನುಗ್ರಹ ರಾಷ್ಟ್ರೀಯ ಪುರಸ್ಕಾರ ಪಡೆದ ಗುಲ್ಬರ್ಗದ ಹಣಮಂತ ದೇವನೂರ ಮಾತನಾಡಿ, ನನ್ನ ಸಣ್ಣ ಸೇವೆ ಗುರುತಿಸಿ ಇಂತಹ ದೊಡ್ಡ ಪುರಸ್ಕಾರ ಮತ್ತು ಗೌರವ ನೀಡಿರುವುದು ಸಂತಸ ತಂದಿದೆ. ದೇವಿಯ ಅನುಗ್ರಹದಿಂದ ನಾನು ಈ ಪ್ರಶಸ್ತಿಗೆ ಭಾಜನನಾಗಿದ್ದೇನೆ. ಇದರಿಂದ ನನ್ನ ಸೇವೆಗೆ ಇನ್ನಷ್ಟು ಪ್ರೇರಣೆ ದೊರೆತಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ದೊಡ್ಡಮ್ಮ ದೇವಿ ಉಪಾಸಕರಾದ ಶ್ರೀ ಸಿದ್ದಪ್ಪಾಜೀ ಮಾತನಾಡಿ, ಭಗವತಿಯ ಅನುಗ್ರಹದಿಂದ ಸಾಮಾನ್ಯರು ಮಹಾನ್ ವ್ಯಕ್ತಿಯಾಗಿ ಇತಿಹಾಸ ಪುರುಷರಾದ ಉದಾಹರಣೆ ಸಾಕಷ್ಟಿದೆ ಎಂದರು. ಹಣಮಂತ ದೇವನೂರ ಅವರಿಗೆ ಶ್ರೀ ದೊಡ್ಡಮ್ಮದೇವಿ ಅನುಗ್ರಹ ರಾಷ್ಟ್ರೀಯ ಪುರಸ್ಕಾರ ಹಾಗೂ ಸೌಂದರ್ಯ ಲಹರಿ ಉಪಾಸಕರಾದ ಕಾಮಾಕ್ಷಮ್ಮ ಅವರಿಗೆ ಶ್ರೀ ಲಲಿತಾ ಪುರಸ್ಕಾರ ನೀಡಿ ಗೌರವಿಸಲಾಯಿತು.

Dodamma Charitable Trust ಕಾರ್ಯಕ್ರಮದಲ್ಲಿ ಹೊಸಕೋಟೆ ಶ್ರೀ ಶಾರದಾಶ್ರಮದ ಅಧ್ಯಕ್ಷೆ ಮಾತಾಜಿ ಬ್ರಹ್ಮಮಯಿ, ಶ್ರೀ ಚೈತನ್ಯಮಯಿ ಮಾತಾಜೀ, ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರರಾಜ್, ಲೇಖಕಿ ಆಪ್ತಿ ಪಟವರ್ಧನ್ ಅವರಿಗೆ ಸನ್ಮಾನಿಸಲಾಯಿತು. ಯೋಗಾಚಾರ್ಯ
ರುದ್ರಾರಾಧ್ಯ ಇತರರಿದ್ದರು.

24 ಎಸ್‌ಎಂಜಿ ಅವಾರ್ಡ್
ಹಣಮಂತ ದೇವನೂರ ಅವರಿಗೆ ಶ್ರೀ ದೊಡ್ಡಮ್ಮದೇವಿ ಅನುಗ್ರಹ ರಾಷ್ಟ್ರೀಯ ಪುರಸ್ಕಾರ ನೀಡಲಾಯಿತು. ಮಾತಾಜಿ ವಿವೇಕಮಯಿ, ಎಂ.ಎನ್.ಸುಂದರರಾಜ್, ಶ್ರೀ ಸಿದ್ದಪ್ಪಾಜೀ, ರುದ್ರಾರಾಧ್ಯ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...