Saturday, April 4, 2026
Saturday, April 4, 2026

AIDS awareness Campaign ಪ್ರತೀ ಗರ್ಭಿಣಿಯರನ್ನ ಗುರುತಿಸಿ ಎಚ್ಐವಿ ಪರೀಕ್ಷೆಗೊಳಪಡಿಸಿ- ಸೆಲ್ವಮಣಿ

Date:

AIDS awareness Campaign ಪ್ರತಿ ಗರ್ಭಿಣಿಯರನ್ನು ಮೊದಲನೇ ಮೂರು ತಿಂಗಳ ಅವಧಿಯಲ್ಲಿ ಹೆಚ್‍ಐವಿ ಪರೀಕ್ಷೆಗೆ ಒಳಪಡಿಸಿ ವರದಿಯನ್ನು ಅಪ್‍ಡೇಟ್ ಮಾಡಬೇಕು. ಏಡ್ಸ್ ದುರ್ಬಲ ವರ್ಗದಿಂದ ಈ ಸೋಂಕು ಹೆಚ್ಚಾಗಿ ಹರಡುವ ಕಾರಣ ಇದಕ್ಕಾಗಿಯೇ ಇರುವ 6 ಎನ್‍ಜಿಓ ಗಳು ಇಂತಹವನ್ನು ಗುರುತಿಸಿ, ಕಾಲ ಕಾಲಕ್ಕೆ ಪರೀಕ್ಷೆಗೊಳಪಡಿಸಿ, ಸೂಕ್ತ ಚಿಕಿತ್ಸೆ ಮತ್ತು ಈ ಬಗ್ಗೆ ಜಾಗೃತಿ-ಶಿಕ್ಷಣವನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೇಲ್ವಮಣಿಯವರು ತಿಳಿಸಿದರು.

2022-23 ರಲ್ಲಿ 265 ಮತ್ತು 2023-24 ರಲ್ಲಿ ಈವರೆಗೆ 111 ಹೆಚ್‍ಐವಿ ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 8 ವಿದ್ಯಾರ್ಥಿಗಳಿಗೆ ಹೆಚ್‍ಐವಿ ಪಾಸಿಟಿವ್ ಇರುವುದು ಪತ್ತೆಯಾಗಿದೆ, ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲೇಜುಗಳಲ್ಲಿ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮಗಳು ಹೆಚ್ಚಬೇಕು. ಇದಕ್ಕೆ ಕಾರಣವಾಗುತ್ತಿರುವ ಮೂಲವನ್ನು ಹುಡುಕಿ ನಿಯಂತ್ರಣ ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಕೀಟಜನ್ಯ ರೋಗ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ಮಾತನಾಡಿ, ಹವಾಮಾನ ಬದಲಾವಣೆಯಿಂದ ಮಾನವನ ಆರೋಗ್ಯದ ಮೇಲೆ ಅನೇಕ ಪರಿಣಾಮಗಳಾಗುತ್ತಿದ್ದು, ಇದರ ಕುರಿತು ಜಾಗೃತಿ ಹಾಗೂ ನಿಯಂತ್ರಿಸಲು 2019 ರಲ್ಲಿ ಕೇಂದ್ರ ಸರ್ಕಾರ ನ್ಯಾಷನಲ್ ಪ್ರೋಗ್ರಾಮ್ ಆನ್ ಕ್ಲೈಮೇಟ್ ಚೇಂಜ್ ಕಾರ್ಯಕ್ರಮ ಜಾರಿಗೊಳಿಸಿದೆ.

ಹವಾಮಾನ ಬದಲಾವಣೆಯಿಂದ ಶಾಖ ತರಂಗ, ಚಂಡ ಮಾರುತ, ತೀವ್ರ ಉಸಿರಾಟದ ಖಾಯಿಲೆಗಳು ಇತರೆ ದುಷ್ಪರಿಣಾಮಗಳು ಹೆಚ್ಚುತ್ತಿದ್ದು, ಸಂಶೋಧನೆ ಪ್ರಕಾರ ವಿಶ್ವದಲ್ಲಿ 3.6 ಬಿಲಿಯನ್ ಜನರು ಹವಾಮಾನ ವೈಪರೀತ್ಯದಿಂದಾಗುವ ಖಾಯಿಲೆಗಳಿಗೆ ಒಳಗಾಗುವ ಹಾಗೂ 2023 ರ ಹೊತ್ತಿಗೆ 2.5 ಲಕ್ಷ ಹೆಚ್ಚುವರಿ ಸಾವು ಇದರಿಂದ ಸಂಭವಿಸಬಹುದು ಎಂದು ಸಂಶೋಧನೆಗಳು ಹೇಳುತ್ತಿವೆ. ಆದ್ದರಿಂದ ಈ ಕಾರ್ಯಕ್ರಮದಡಿ ಈ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಲ್ಟಿಸೆಕ್ಟರಲ್ ಟಾಸ್ಕ್‍ಫೋರ್ಸ್ ಸಮಿತಿ ರಚಿಸಬೇಕೆಂದರು.

AIDS awareness Campaign ಜಿಲ್ಲಾಧಿಕಾರಿಗಳು ಸಮಿತಿ ರಚನೆ ಮಾಡಿ, ಕಾರ್ಯಕ್ರಮದನ್ವಯ ಎಲ್ಲ ಆಸ್ಪತ್ರೆಗಳಲ್ಲಿ ಉಸಿರಾಟದ ಖಾಯಿಲೆಗಳನ್ನು ಆನ್‍ಲೈನ್ ಎಂಟ್ರಿ ಮಾಡಬೇಕು. ಇತರೆ ದುಷ್ಪರಿಣಾಮ ತಡೆಗಟ್ಟಲು ನಿಯಮಾನುಸಾರ ಕ್ರಮ ವಹಿಸಬೇಕೆಂದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಸುಜಾತ ಕೆಆರ್, ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ, ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಅನುಷ್ಟಾನಾಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖೆಯ ಮುಖ್ಯಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...