Sunday, August 2, 2026
Sunday, August 2, 2026

District Consumer Disputes Redressal Commission ಜನರಲ್ ಇನ್ಷೂರೆನ್ಸ್ ಸಂಸ್ಥೆ ಸೇವಾ ನ್ಯೂನತೆ ಬಗ್ಗೆ ಗ್ರಾಹಕರಿಗೆ ನ್ಯಾಯ ಒದಗಿಸಿದ ಆಯೋಗ

Date:

District Consumer Disputes Redressal Commission ಶಿವಮೊಗ್ಗದ ಗೋವಿಂದನ್ ನಾಯರ್ ಎಂಬುವವರು ತಮ್ಮ ವಿದ್ಯುತ್‌ಚಾಲಿತ ಟಾಟಾ ಕಾರಿನ ವಿಮೆಯನ್ನು ದಿ:೦
06/11/2022 ರಿಂದ ದಿ:05/10/2023ರ ಅವಧಿಗೆ ಮೆಚೋಲಮಂಡಲಮ್ ಜನರಲ್ ಇನ್ಸೂರೆನ್ಸ್ ಕಂಪನಿಯಿಂದ ಪಡೆದಿದ್ದು, ದಿ: 26/11/2020 ರಂದು ತಮ್ಮ ಮನೆಯ ಪೋರ್ಟಿಕೋದಲ್ಲಿ ನಿಲ್ಲಿಸಿದ್ದ ಕಾರಿಗೆ ವಿದ್ಯುತ್ ಚಾರ್ಜಿಂಗ್‌ಗಾಗಿ ಚಾರ್ಜರ್‌ನ್ನು ಅಳವಡಿಸಿದ್ದು, ಆಕಸ್ಮಿಕದಿಂದ ವಿದ್ಯುತ್ ಚಾರ್ಜರ್‌ಗೆ ಹಾನಿಯಾಗಿದೆ. ಈ ಬಗ್ಗೆ ವಿಮೆ ಪರಿಹಾರ ಕೋರಿ ಕಾರಿನ ಮಾಲೀಕರು ಇನ್ಸೂರೆನ್ಸ್ ಕಂಪನಿಗೆ ಸಲ್ಲಿಸಿದ ಕ್ಲೈಮ್ ಅನ್ನು ಪುರಸ್ಕರಿಸದ ಕಾರಣ, ಇನ್ಸೂರೆನ್ಸ್ ಸಂಸ್ಥೆಯ ವಿರುದ್ಧ ಸೇವಾ ನ್ಯೂನ್ಯತೆ ಆರೋಪಿಸಿ ಮತ್ತು ಪರಿಹಾರ ಕೋರಿ ಶಿವಮೊಗ್ಗದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು.

District Consumer Disputes Redressal Commission ಈ ಬಗ್ಗೆ ಎರಡೂ ಪಕ್ಷಗಾರರ ವಿಚಾರಣೆ ನಡೆಸಿದ ಆಯೋಗವು ಇನ್ಸೂರೆನ್ಸ್ ಕಂಪನಿ ವಿಮೆ ಪರಿಹಾರ ಒದಗಿಸುವಲ್ಲಿ ಸೇವಾ ನ್ಯೂನ್ಯತೆ ಎಸಗಿರುವುದು ದೃಢಪಟ್ಟ ಕಾರಣ ಮೆಟೋಲಮಂಡಲಮ್, ಜನರಲ್ ಇನ್ಸೂರೆನ್ಸ್ ಕಂಪನಿಯವರು ವಿದ್ಯುತ್ ಚಾರ್ಜರ್ ಬಾಬು ರೂ.34,840/-ಗಳನ್ನು ಆದೇಶ ದಿನಾಂಕದಿಂದ 45 ದಿನಗಳ ಒಳಗಾಗಿ ದೂರುದಾರರಿಗೆ ಪಾವತಿಸಲು, ತಪ್ಪಿದ್ದಲ್ಲಿ ಈ ಮೊತ್ತಕ್ಕೆ ವಾರ್ಷಿಕ ಶೇಕಡ 7% ರಂತೆ ಬಡ್ಡಿಯೊಂದಿಗೆ ಪಾವತಿಸಲು ಹಾಗೂ ರೂ.10,000/-ಗಳನ್ನು ದೂರುದಾರರಿಗೆ ಆದ ಮಾನಸಿಕ ಹಿಂಸೆಗಾಗಿ ಮತ್ತು ರೂ.10,000/-ಗಳನ್ನು ವ್ಯಾಜ್ಯ ವೆಚ್ಚವಾಗಿ ಆದೇಶ ದಿನಾಂಕದಿಂದ 45 ದಿನಗಳ ಒಳಗಾಗಿ ದೂರುದಾರರಿಗೆ ಪಾವತಿಸಲು, ತಪ್ಪಿದ್ದಲ್ಲಿ ಈ ಮೊತ್ತಕ್ಕೆ ವಾರ್ಷಿಕ ಶೇಕಡ 10% ರಂತೆ ಬಡ್ಡಿಯೊಂದಿಗೆ ಪಾವತಿಸುವಂತೆ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ, ಮಹಿಳಾ ಸದಸ್ಯರಾದ ಸವಿತಾ, ಬಿ. ಪಟ್ಟಣಶೆಟ್ಟಿ ಹಾಗೂ ಸದಸ್ಯರಾದ ಬಿ.ಡಿ.ಯೋಗಾನಂದ ಇವರನ್ನು ಒಳಗೊಂಡ ಪೀಠವು ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...