Wednesday, December 17, 2025
Wednesday, December 17, 2025

Acharya Tulsi National College of Commerce ವಿದ್ಯಾರ್ಥಿಗಳ ಆಸಕ್ತಿ ಪ್ರತಿಭೆ ಪ್ರದರ್ಶಿಸಲು ಸ್ಪರ್ಧೆಗಳಿಂದ ಸೂಕ್ತ ಅವಕಾಶ- ಡಾ.ಪಿ.ಆರ್.ಮಮತಾ

Date:

Acharya Tulsi National College of Commerce ವಿದ್ಯಾರ್ಥಿಗಳಲ್ಲಿ ವಿದ್ಯಾಭ್ಯಾಸದ ಜತೆಯಲ್ಲಿ ವೈವಿಧ್ಯ ಆಸಕ್ತಿ ಬೆಳೆಸಿಕೊಳ್ಳುವಂತೆ ಪೋಷಕರು ಹಾಗೂ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು.

ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೆಂಕಿ ಇಲ್ಲದೇ ಒಲೆರಹಿತ ಅಡುಗೆ ತಿಂಡಿ ತಿನಿಸುಗಳನ್ನು ರುಚಿಶುಚಿಯಾಗಿ ತಯಾರಿಸುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಶ್ರಮ ವಹಿಸಿ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವುದು ಅತ್ಯಂತ ಶ್ಲಾಘನೀಯ. ಒಲೆರಹಿತವಾಗಿ ರುಚಿಯಾಗಿ ಅಡುಗೆ ತಯಾರಿಸುವುದು ಪರಿಶ್ರಮದ ಕೆಲಸ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರೊ. ಮಮತಾ ಪಿ.ಆರ್. ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಆಸಕ್ತಿ ಹಾಗೂ ಪ್ರತಿಭೆಯನ್ನು ಪ್ರದರ್ಶಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತದೆ. ಕಾಲೇಜು ಅವಧಿಯ ವಿಶೇಷ ಕ್ಷಣಗಳನ್ನು ನಮಗೆ ಒದಗಿಸುತ್ತವೆ ಎಂದು ಹೇಳಿದರು.

ಎನ್‌ಎಸ್‌ಎಸ್ ಘಟಕ 1ರ ಕಾರ್ಯಕ್ರಮಾಧಿಕಾರಿ ಪ್ರೊ. ಕೆ.ಎಂ.ನಾಗರಾಜು ಮಾತನಾಡಿದರು. ಇದೇ ಸಂದರ್ಭದಲ್ಲಿ ಒಲೆರಹಿತ ಅಡುಗೆ ಸಿದ್ಧಪಡಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ವಿದ್ಯಾರ್ಥಿಗಳು ನಾನಾ ರೀತಿಯ ಹಣ್ಣು, ತರಕಾರಿ, ತಿಂಡಿ, ತಿನಿಸು ಬಳಸಿ ಫ್ರೂಟ್ ಸಲಾಡ್ ಸೇರಿದಂತೆ ವೈವಿಧ್ಯ ಬಗೆಯ ತಿನಿಸುಗಳನ್ನು ತಯಾರಿಸಿದ್ದರು. 14 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಟಿ.ಡಿ.ನಾಗರಾಜ್, ಪುನೀತ್, ಸ್ಮಿತಾ ಹಾಗೂ ರೂಹಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.

ಸ್ಪರ್ಧೆಯಲ್ಲಿ 3ನೇ ವರ್ಷದ ಬಿಕಾಂ ವಿದ್ಯಾರ್ಥಿ ವರ್ಷಿನಿ ಎಂ., ರುಚಿತಾ ಸಿ.ಆರ್. ಪ್ರಥಮ ಸ್ಥಾನ, ಶ್ರೇಯಸ್ ಡಿ.ವಿ., ಸಹನ ವಿ ದ್ವಿತೀಯ ಸ್ಥಾನ ಹಾಗೂ ಮಧು ಎ. ಪ್ರಿಯಾ ಎಸ್. ತೃತೀಯ ಸ್ಥಾನ ಪಡೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...