Sunday, May 3, 2026
Sunday, May 3, 2026

Youth Hostel Association of India ಚಾರಣದಿಂದ ಬದುಕಿನಲ್ಲಿ ವಿಶೇಷ ಮನೋಲ್ಲಾಸ

Date:

Youth Hostel Association of India ಪ್ರತಿಯೊಬ್ಬರು ಚಾರಣ ಪ್ರವಾಸದಲ್ಲಿ ಕಾಲ ಕಾಲಕ್ಕೆ ಪಾಲ್ಗೊಳ್ಳುವುದು ಅತ್ಯಂತ ಮುಖ್ಯ ಆಗಿದ್ದು, ನಿತ್ಯದ ಕಾರ್ಯಗಳಿಂದ ಬಿಡುವು ಮಾಡಿಕೊಂಡು ಚಾರಣಗಳಲ್ಲಿ ಭಾಗವಹಿಸುವುದರಿಂದ ಬದುಕಿನಲ್ಲಿ ವಿಶೇಷ ಮನೋಲ್ಲಾಸ, ಉತ್ಸಾಹ ನಮ್ಮದಾಗುತ್ತದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕದ ಅಧ್ಯಕ್ಷ ಎಸ್.ಎಸ್.ವಾಗೇಶ್ ಹೇಳಿದರು.

ತರುಣೋದಯ ಘಟಕದ ಸದಸ್ಯರಿಗಾಗಿ ಏರ್ಪಡಿಸಿದ್ದ ಎರಡು ದಿನದ ಪ್ರವಾಸ ಚಾರಣಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿ ದಿನ ಮಾಡುವ ಕೆಲಸಗಳಿಂದ ಮುಕ್ತಿ ಹೊಂದಿ ಪ್ರವಾಸ ಚಾರಣ ಹೋಗುವುದರಿಂದ ಮನಸ್ಸಿಗೆ ಹಿತ ಮತ್ತು ಸಂತೋಷ ಸಿಗುತ್ತದೆ ಎಂದು ತಿಳಿಸಿದರು.

ಪ್ರಕೃತಿ ಮಡಿಲಿನ ಜಲಪಾತಗಳಲ್ಲಿ ಎಲ್ಲಾ ವಯೋಮಾನದವರು ಮಕ್ಕಳಂತೆ ಆಟವಾಡಲು ಸಿರಿಮನೆ ಮತ್ತು ಬಂಡಜ್ಜೆ ಜಲಪಾತಕ್ಕೆ ಚಾರಣ ಏರ್ಪಡಿಸಲಾಗಿದೆ. ಶೃಂಗೆರಿ, ಕಳಸ, ಹೊರನಾಡು ಮುಂತಾದ ಪ್ರಸಿದ್ದ ಪವಿತ್ರ ಸ್ಥಳಗಳ ಭೇಟಿ ಇರಲಿದೆ. ಈ ಕಾರ್ಯಕ್ರಮದ ಮುಂದಾಳತ್ವವನ್ನು ಎಸ್.ಉಮೇಶ್ ಮತ್ತು ಮಮತ ಅವರು ವಹಿಸಿಕೊಂಡಿದ್ದು, ಕಾರ್ಯಕ್ರಮದ ರೂವಾರಿ ಸುರೇಶ್ ಕುಮಾರ್, ಮಲ್ಲಿಕಾರ್ಜುನ್ ವಹಿಸಿಕೊಂಡಿದ್ದಾರೆ ಎಂದರು.

Youth Hostel Association of India ಮುಖ್ಯ ಅತಿಥಿಯಾಗಿ ಆಗಮಿಸಿದ ವೈಎಚ್‌ಎಐ ರಾಜ್ಯ ಮಾಜಿ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಯಾವುದೇ ವಾಹನ ಹೋಗದ ಸ್ಥಳಗಳಿಗೆ ಒಬ್ಬ ಚಾರಣಿಗ ಹೋಗಿ ಪ್ರಕೃತಿ ಸೌಂದರ್ಯ ಸವಿಯಬಹುದಾಗಿದ್ದು, ಅರಣ್ಯ ಇಲಾಖೆಯ ಬಿಗಿ ಭದ್ರತೆಯಲ್ಲಿ ಸುಂದರ ಸ್ಥಳಗಳ ವೀಕ್ಷಣೆಗೆ ಯೂತ್ ಹಾಸ್ಟೆಲ್ಸ್ ಅನುಕೂಲ ಮಾಡಿ ಕೊಡುತ್ತಿದ್ದು, ಇದರ ಸದುಪಯೋಗವನ್ನು ನಾಗರೀಕರು ಪಡೆಯ ಬೇಕು ಎಂದು ತಿಳಿಸಿದರು.

ಡಾ. ಅಶೋಕ್, ಸುರೇಶ್, ಧಾನಮ್ಮ, ಡಾ. ಶಾಂತಾಶೇಖರ್ ಮುಂತಾದ ಐವತ್ತು ಸದಸ್ಯರ ತಂಡ ಭಾಗವಹಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...