Sunday, December 14, 2025
Sunday, December 14, 2025

Karnataka Rajyotsava ಕನ್ನಡವೇ ಸತ್ಯ, ಕನ್ನಡವೇ ನಿತ್ಯ

Date:

Karnataka Rajyotsava ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡ ದಿನವೆಂದು ಆಚರಣೆ ಮಾಡಲಾಗುತ್ತದೆ. ಈ ದಿನವನ್ನು ಕರ್ನಾಟಕ ರಚನೆಯ ದಿನ ಎಂದು ಕರೆಯಲಾಗುತ್ತದೆ.

ಎಲ್ಲಾದರೂ ಇರು ಎಂತಾದರೂ ಇರು… ಎಂದೆಂದಿಗೂ ನೀ ಕನ್ನಡವಾಗಿರು… ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬ ಸಾಲುಗಳನ್ನು ನಮ್ಮ ರಾಷ್ಟ್ರ ಕವಿ ಕುವೆಂಪು ಅವರು ರಚಿಸಿದ್ದಾರೆ. ಈ ಸಾಲುಗಳು ನಾವು ಎಲ್ಲೇ ಹೋದ್ರು, ಎಲ್ಲೇ ಇದ್ದರೂ ನಮ್ಮ ಕನ್ನಡವನ್ನು ಬಿಟ್ಟು ಕೊಡಬಾರದು ಎಂಬುವುದನ್ನು ಒತ್ತಿ ಹೇಳುತ್ತದೆ… ಕನ್ನಡ ಕೇವಲ ಭಾಷೆ ಯಾಗಿರದೆ , ಭಾವನೆಯೂ ಆಗಿದೆ…

ಕರ್ನಾಟಕ ರಾಜ್ಯಕ್ಕೆ ಮೊದಲ ಹೆಸರು ಮೈಸೂರು ರಾಜ್ಯ. 1956ರ ನವೆಂಬರ್ 1ರಂದು ವಿವಿಧ ಪ್ರದೇಶಗಳಲ್ಲಿ ಕನ್ನಡ ಮಾತನಾಡುತ್ತಿದ್ದ, ಜನರನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ರಚನೆ ಮಾಡಲಾಯಿತು. 1973ರ ನವೆಂಬರ್ 1ರಂದು ರಾಜ್ಯದ ಹೆಸರನ್ನು ಕರ್ನಾಟಕ ಎಂದು ಬದಲಾಯಿಸಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವಾಗ ದೇವರಾಜ್ ಅರಸ್ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳಿತ್ತು. ಈಗ ಕರ್ನಾಟಕದಲ್ಲಿ 31 ಜಿಲ್ಲೆಗಳಿವೆ. ನಮ್ಮ ಕರ್ನಾಟಕವನ್ನು ಕನ್ನಡ ನಾಡು, ಕರುನಾಡು, ಶ್ರೀಗಂಧದ ನಾಡು ಎಂದು ಕೂಡ ಕರೆಯಲಾಗುತ್ತದೆ. ನಮ್ಮ ನಾಡ ದೇವಿ ಭುವನೇಶ್ವರಿ. ನಮ್ಮ ರಾಜ್ಯದ ಬಾವುಟ ಹಳದಿ ಮತ್ತು ಕೆಂಪು ಬಣ್ಣದಿಂದ ಕೂಡಿದೆ. ಕನ್ನಡ ಹೋರಾಟಗಾರರಾದ ಎಂ. ರಾಮಮೂರ್ತಿ ಅವರು ಮತ್ತು ಕೆಂಪು ಬಣ್ಣದ ಬಾವುಟವನ್ನು ಸಿದ್ಧಪಡಿಸಿದ್ದರು. ಹಳದಿ ಬಣ್ಣವು ಶಾಂತಿ ಹಾಗೂ ಸೌಹಾರ್ದತೆಯನ್ನು ಸೂಚಿಸುತ್ತದೆ. ಕೆಂಪು ಬಣ್ಣವು ಕ್ರಾಂತಿಯ ಸಂಕೇತವಾಗಿದೆ. ಕನ್ನಡಾಂಬೆ ಭುವನೇಶ್ವರಿಯ ಅರಿಶಿಣ ಕುಂಕುಮದ ಸಂಕೇತವು ಕೂಡ ಆಗಿದೆ.

Karnataka Rajyotsava ಇತ್ತೀಚಿನ ವರ್ಷಗಳಲ್ಲಿ ಕನ್ನಡದ ಸ್ಥಿತಿಗತಿ ಬದಲಾಗಿದೆ. ಕನ್ನಡದ ಮೇಲೆ ಇತರೆ ಭಾಷಿಕರ ದಬ್ಬಾಳಿಕೆ ಹೆಚ್ಚಾಗಿದೆ. ಕನ್ನಡಿಗರಿಗೆ ಉದ್ಯೋಗ ದೊರಕುವುದು ಕಷ್ಟವಾಗಿದೆ. ಇಂತಹ ಸಮಯದಲ್ಲಿ ಕನ್ನಡದ ಅಸ್ಮಿತೆಗಾಗಿ ಎಲ್ಲರೂ ಹೋರಾಡಬೇಕಾಗಿದೆ. ಕೇವಲ ಈ ದಿನ ಮಾತ್ರ ಕನ್ನಡ ರಾಜ್ಯೋತ್ಸವ ಆಚರಿಸಿದರೆ ಕನ್ನಡ ಉಳಿಸಿದಂತೆ ಆಗುವುದಿಲ್ಲ. ಕನ್ನಡ ನಮ್ಮ ಉಸಿರಾಗಿರಬೇಕು. ಎಂತಹ ಸಂದರ್ಭದಲ್ಲೂ ಕನ್ನಡ ಬಿಟ್ಟುಕೊಡಬಾರದು. ಬೇರೆ ಭಾಷೆಗಳನ್ನು ಕಲಿಯುವುದು ಖಂಡಿತ ತಪ್ಪಲ್ಲ. ಆದರೆ ಬೇರೆ ಭಾಷೆ ಕಲಿತು ಕನ್ನಡ ಮರೆಯುವುದು ತಪ್ಪು. ಈ ಸುಂದರ ಸಂಭ್ರಮದ ದಿನದಂದು ನಾವೆಲ್ಲರೂ ನಮ್ಮ ನೆಲ, ಜಲ, ಭಾಷೆ ಉಳಿವಿಗಾಗಿ ಪಣ ತೊಡಬೇಕಾಗಿದೆ.

ಕೆ ಲೈವ್ ಓದುಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಷಯಗಳು…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...