Thursday, June 18, 2026
Thursday, June 18, 2026

Kannada Rajyotsava Celebration ನಮ್ಮೆಲ್ಲರ ಜೀವನದಲ್ಲಿ ನಿತ್ಯೋತ್ಸವವಾಗಲಿ ಕನ್ನಡ – ಜಿ.ಎಸ್ ಓಂಕಾರ್

Date:

Kannada Rajyotsava Celebration ಕನ್ನಡ ಭಾಷೆಯನ್ನು ನಾಡಿನ ಪ್ರತಿಯೊಬ್ಬರು ಹೆಚ್ಚಾಗಿ ಬಳಸಬೇಕು. ನಮ್ಮೆಲ್ಲರ ಜೀವನದಲ್ಲಿ ನಿತ್ಯೋತ್ಸವವಾಗಲಿ ಕನ್ನಡ, ಕನ್ನಡವೇ ನಮ್ಮ ಉಸಿರು, ಕನ್ನಡದಲ್ಲೇ ಮಾತನಾಡೋಣ ಎಂದು ಯೋಗ ಶಿಕ್ಷಕ ಜಿ.ಎಸ್.ಓಂಕಾರ್ ಹೇಳಿದರು.

ಶಿವಮೊಗ್ಗ ನಗರದ ಕುವೆಂಪು ರಸ್ತೆಯ ಆರ್ಯ ವೈಶ್ಯ ಶ್ರೀರಾಮ ಸಹಕಾರ ಸಂಘದ ರಾಘವ ಸಭಾಂಗಣದಲ್ಲಿ ಶ್ರೀ ಶಿವಗಂಗಾ ರಾಘವ ಯೋಗ ಶಾಖೆ ಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಮಾತನಾಡಿ, ಕನ್ನಡವ ಕಲಿಸೋಣ, ಉಳಿಸೋಣ, ಬೆಳೆಸೋಣ. ಕನ್ನಡವೇ ನಮ್ಮ ಪ್ರಾಣವಾಗಲಿ, ಅನ್ಯ ಭಾಷೆಯ ಪ್ರಭಾವ ಕನ್ನಡದ ಮೇಲೆ ಬೀರದಂತೆ ನಾವೆಲ್ಲ ಎಚ್ಚರ ವಹಿಸೋಣ ಎಂದು ತಿಳಿಸಿದರು.

ಶ್ರೀ ಶಿವಗಂಗಾ ರಾಘವ ಯೋಗ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ ಆಚರಿಸಿ ತಾಯಿ ಭುವನೇಶ್ವರಿಗೆ ಸೂರ್ಯ ನಮಸ್ಕಾರದ ಮೂಲಕ ಯೋಗಾರತಿ ಬೆಳಗಿ ಧ್ವಜ ವಂದನೆ ಸಲ್ಲಿಸಿ ನಂತರ ಸಾಮೂಹಿಕವಾಗಿ ನಾಡಗೀತೆ ಹಾಡಲಾಯಿತು.

Kannada Rajyotsava Celebration ಕರ್ನಾಟಕ ಸರ್ಕಾರದ ಘೋಷವಾಕ್ಯವಾದ ಕರ್ನಾಟಕ ಸಂಭ್ರಮ 50, ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ವಾಕ್ಯಗಳನ್ನು ಒಕ್ಕೊರಲಿನಿಂದ ಹೇಳಲಾಯಿತು. ಶ್ರೀ ಶಿವಗಂಗಾ ಯೋಗ ಕೇಂದ್ರದ ಕಾರ್ಯಾಧ್ಯಕ್ಷ ಯೋಗ ಆಚಾರ್ಯ ಸಿ. ವಿ.ರುದ್ರಾರಾಧ್ಯರ ಪರವಾಗಿ ಸಾರ್ವಜನಿಕರಿಗೆ ಮತ್ತು ಯೋಗ ಶಿಕ್ಷಣಾರ್ಥಿಗಳೆಲ್ಲರಿಗೂ ಶುಭಾಶಯ ತಿಳಿಸಲಾಯಿತು.
ಸಂಭ್ರಮದಲ್ಲಿ ಯೋಗ ಶಿಕ್ಷಣಾರ್ಥಿಗಳೊಂದಿಗೆ ಶಿಕ್ಷಕ ಜಿ.ಎಸ್.ಓಂಕಾರ್, ವಿಜಯ ಕೃಷ್ಣ ವೈ.ಎಸ್, ಹರೀಶ್, ನರಸೂಜಿ ರಾವ್, ಸುಜಾತ ಮಧುಕೇಶ್ವರ್, ಗಾಯತ್ರಿ ಅಶೋಕ್, ಯೋಗ ಸಾಧಕ ಜಿ.ವಿಜಯಕುಮಾರ್, ಜಿ.ಎಸ್.ಜಗದೀಶ್, ಮಹೇಶ್, ಆನಂದ್, ಸುಬ್ರಮಣಿ, ಅರುಣ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...