Saturday, September 28, 2024
Saturday, September 28, 2024

Karnataka Rajyotsava 2023 ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ

Date:

Karnataka Rajyotsava 2023 ಅಪಾರ ಕೀರ್ತಿ ಗಳಿಸಿ ಮೆರೆದ ಭವ್ಯ ನಾಡಿದು, ಕರ್ನಾಟಕವಿದುವೆ ನೃತ್ಯ, ಶಿಲ್ಪ ಕಲೆಯ ಬೀಡಿದು. ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ, ಕನ್ನಡದ ನೆಲ-ಜಲ, ಬದುಕು, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಸಂಗೀತ ಎಲ್ಲವನ್ನೂ ಒಳಗೊಂಡ ಕನ್ನಡತನ. ಕನ್ನಡ ನಮ್ಮ ಅಸ್ಮಿತೆ-ಅನನ್ಯತೆ. ಕನ್ನಡ ನಾಡು-ನುಡಿ, ಇತಿಹಾಸ-ಪರಂಪರೆ ಹಾಗೂ ಸಂಸ್ಕೃತಿಗಳನ್ನು ಉಳಿಸುವ ಮತ್ತು ಬೆಳೆಸುವ ದೃಢ ಸಂಕಲ್ಪದೊಂದಿಗೆ ವಿಶೇಷ ಆಚರಣೆ, ಹೋರಾಟಗಳು ಕನ್ನಡತನಕ್ಕೆ ದಕ್ಕೆಯಾದಗಲೆಲ್ಲ ನೆಡೆಯುತ್ತಲೇ ಬಂದಿವೆ.

ನವೆಂಬರ್ ಬಂತೆಂದರೆ ನಾಡಿನಾದ್ಯಂತ ಕನ್ನಡ ಕಲರವದ ಕಂಪು ಎಲ್ಲೆಡೆ ಹರಡುತ್ತದೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಅಂತೆಯೇ

ಇಂದು ರಿಪ್ಪನಪೇಟೆ ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಬ್ ಇನ್ಸ್ಪೆಕ್ಟರ್ ಸಿ.ಎಂ ಪ್ರವೀಣ್ ರವರು ವಿದ್ಯುಕ್ತ ಚಾಲನೆ ನೀಡಿದರು.

ನಂತರ ಪಟ್ಟಣದ ವಿವಿಧ ರಸ್ತೆಗಳಲ್ಲಿ ತಾಯಿ ಭುವನೇಶ್ವರಿ ಟ್ಯಾಬ್ಲೋದೊಂದಿಗೆ ಭುವನೇಶ್ವರಿ ವೇಷ ಭೂಷಣ ತೊಟ್ಟ ಮಕ್ಕಳು ಪಟ್ಟಣದ ವಿವಿಧ ರಸ್ತೆಯಲ್ಲಿ ಮಹಿಳಾ ಸಂಘದವರಿಂದ ಪೂರ್ಣಕುಂಭ ಸ್ವಾಗತದೊಂದಿಗೆ, ಡೊಳ್ಳು ಕುಣಿತ, ಕಂಸಾಳೆ, ಚಂಡೆ, ವೀರಗಾಸೆಗಳೊಂದಿಗೆ ಮೆರವಣಿಗೆ ಸಾಗಿತು.

Karnataka Rajyotsava 2023 ಇಂದು ರಾತ್ರಿ 8 ಗಂಟೆಗೆ ಜೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಸಾದ್ವಿನಿ ಕೊಪ್ಪ, ಮೆಹಬೂಬ್ ಸಾಬ್, ಅಶ್ವಿನ್ ಶರ್ಮ, ಎದೆತುಂಬಿ ಹಾಡು ಖ್ಯಾತಿಯ ಸಾನ್ವಿ ಜಿ. ಭಟ್ ಇವರಿಂದ ರಸಮಂಜರಿ ಕಾರ್ಯಕ್ರಮಗಳು ಜರುಗಲಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...