Sunday, August 2, 2026
Sunday, August 2, 2026

Karnataka Rajyotsava 2023 ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ

Date:

Karnataka Rajyotsava 2023 ಅಪಾರ ಕೀರ್ತಿ ಗಳಿಸಿ ಮೆರೆದ ಭವ್ಯ ನಾಡಿದು, ಕರ್ನಾಟಕವಿದುವೆ ನೃತ್ಯ, ಶಿಲ್ಪ ಕಲೆಯ ಬೀಡಿದು. ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ, ಕನ್ನಡದ ನೆಲ-ಜಲ, ಬದುಕು, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಸಂಗೀತ ಎಲ್ಲವನ್ನೂ ಒಳಗೊಂಡ ಕನ್ನಡತನ. ಕನ್ನಡ ನಮ್ಮ ಅಸ್ಮಿತೆ-ಅನನ್ಯತೆ. ಕನ್ನಡ ನಾಡು-ನುಡಿ, ಇತಿಹಾಸ-ಪರಂಪರೆ ಹಾಗೂ ಸಂಸ್ಕೃತಿಗಳನ್ನು ಉಳಿಸುವ ಮತ್ತು ಬೆಳೆಸುವ ದೃಢ ಸಂಕಲ್ಪದೊಂದಿಗೆ ವಿಶೇಷ ಆಚರಣೆ, ಹೋರಾಟಗಳು ಕನ್ನಡತನಕ್ಕೆ ದಕ್ಕೆಯಾದಗಲೆಲ್ಲ ನೆಡೆಯುತ್ತಲೇ ಬಂದಿವೆ.

ನವೆಂಬರ್ ಬಂತೆಂದರೆ ನಾಡಿನಾದ್ಯಂತ ಕನ್ನಡ ಕಲರವದ ಕಂಪು ಎಲ್ಲೆಡೆ ಹರಡುತ್ತದೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಅಂತೆಯೇ

ಇಂದು ರಿಪ್ಪನಪೇಟೆ ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಬ್ ಇನ್ಸ್ಪೆಕ್ಟರ್ ಸಿ.ಎಂ ಪ್ರವೀಣ್ ರವರು ವಿದ್ಯುಕ್ತ ಚಾಲನೆ ನೀಡಿದರು.

ನಂತರ ಪಟ್ಟಣದ ವಿವಿಧ ರಸ್ತೆಗಳಲ್ಲಿ ತಾಯಿ ಭುವನೇಶ್ವರಿ ಟ್ಯಾಬ್ಲೋದೊಂದಿಗೆ ಭುವನೇಶ್ವರಿ ವೇಷ ಭೂಷಣ ತೊಟ್ಟ ಮಕ್ಕಳು ಪಟ್ಟಣದ ವಿವಿಧ ರಸ್ತೆಯಲ್ಲಿ ಮಹಿಳಾ ಸಂಘದವರಿಂದ ಪೂರ್ಣಕುಂಭ ಸ್ವಾಗತದೊಂದಿಗೆ, ಡೊಳ್ಳು ಕುಣಿತ, ಕಂಸಾಳೆ, ಚಂಡೆ, ವೀರಗಾಸೆಗಳೊಂದಿಗೆ ಮೆರವಣಿಗೆ ಸಾಗಿತು.

Karnataka Rajyotsava 2023 ಇಂದು ರಾತ್ರಿ 8 ಗಂಟೆಗೆ ಜೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಸಾದ್ವಿನಿ ಕೊಪ್ಪ, ಮೆಹಬೂಬ್ ಸಾಬ್, ಅಶ್ವಿನ್ ಶರ್ಮ, ಎದೆತುಂಬಿ ಹಾಡು ಖ್ಯಾತಿಯ ಸಾನ್ವಿ ಜಿ. ಭಟ್ ಇವರಿಂದ ರಸಮಂಜರಿ ಕಾರ್ಯಕ್ರಮಗಳು ಜರುಗಲಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...