Sunday, December 14, 2025
Sunday, December 14, 2025

Karnataka Forest Department ಕಾಡುಕೋಣದ ಮಾಂಸವನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು

Date:

Karnataka Forest Department ಸೊರಬ ತಾಲೂಕಿನ ಉಳವಿ ಗ್ರಾಮದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಕಾಡುಕೋಣದ ಮಾಂಸವನ್ನು ಆರೋಪಿ ಸಮೇತ ಮಂಗಳವಾರ ಸೊರಬ ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಉಳವಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡುಕೋಣವನ್ನು ಬೇಟೆಯಾಡಿ ಅಕ್ರಮವಾಗಿ ಅದರ ಮಾಂಸವನ್ನು ಸಂಗ್ರಹಿಸಿ ಇಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.

ಅರಣ್ಯಾಧಿಕಾರಿಗಳ ತಂಡ ಉಳವಿ ಗ್ರಾಮದ ವಿವಿಧಡೆ ಸುಮಾರು 23 ಕೆ.ಜಿ. ಕಾಡು ಕೋಣದ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸದಂತೆ ಉಳವಿಯ ಇಬ್ರಾಹಿಂ ಸಾಬ್ ಮುನೀರ್ ಸಾಬ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಾದ ತಸ್ವಿರ್ ಆಹ್ಮದ್ ಸೈಫುಲ್ಲಾ, ನವೀದ್ ಶೇಖ್ ಅಹ್ಮದ್, ಫರೂಕ್ ಇಸ್ಮಾಯಿಲ್ ಪತ್ತೆಗೆ ಬಲೆ ಬೀಸಲಾಗಿದೆ.

Karnataka Forest Department ಸಾಗರದ ಡಿಸಿಎಫ್ ಸಂತೋಷ ಕೆಂಚಪ್ಪನವರ ಹಾಗೂ ಸೊರಬ ಎಸಿಎಫ್ ಸಿ.ಕೆ. ಯೋಗೀಶ್ ಅವರ ಮಾರ್ಗದರ್ಶನದಲ್ಲಿ ಸೊರಬ ವಲಯದ ವಲಯ ಅರಣ್ಯಾಧಿಕಾರಿ ಜಾವೇದ್ ಭಾಷಾ ಅಂಗಡಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಉಪ ವಲಯಾರಣ್ಯಧಿಕಾರಿಗಳಾದ ಮುತ್ತಣ್ಣ, ರಾಮಪ್ಪ, ಮೋಹನ್, ಯೋಗರಾಜ್, ಪರಶುರಾಮ್, ಶರಣಪ್ಪ ಹಾಗೂ ಅರಣ್ಯ ರಕ್ಷಕರಾದ ಮಂಜು, ದೇವರಾಜ್, ಕಸ್ತೂರಮ್ಮ, ಆನಂದ್, ಹರಿ, ಅಶೋಕ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...