Saturday, December 6, 2025
Saturday, December 6, 2025

Belur Gopalakrishna ಬಗರ್ ಹುಕುಂ & ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ

Date:

Belur Gopalakrishna ಶಿವಮೊಗ್ಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದೆ.

ಒಂದೆಡೆ ವನ್ಯಜೀವಿ ಸಂಬಂಧಿತ ವಸ್ತು ಬಳಕೆ & ಸಂಗ್ರಹ ವಿಚಾರವಾಗಿ ದಾಳಿ ನಡೆಸಲಾಗುತ್ತಿದೆ. ಇನ್ನೊಂದೆಡೆ ಮಲೆನಾಡು ಭಾಗದಲ್ಲಿ ಒತ್ತುವರಿ ತೆರವಿಗೆ ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ಬಗರ್ ಹುಕುಂ & ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಬುಕ್ಕಿವರೆ ಹಾಗೂ ಗುಬ್ಬಿಗ ಗ್ರಾಮದಲ್ಲಿ ತೆರವಿಗೆ ಕಾರ್ಯಾಚರಣೆ ನಡೆಸಲಾಗಿದೆ.

ಶಿವಮೊಗ್ಗದ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ.
ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಫುಲ್ ಗರಂ ಆಗಿದ್ದಾರೆ.

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಗೆ ಶಾಸಕ ಬೇಳೂರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ನೋಟಿಸ್ ನೀಡಿ, ತೆರವಿಗೆ ಮುಂದಾಗಿದ್ದ ಅರಣ್ಯಾಧಿಕಾರಿಗಳ ವಿರುದ್ದ ಶಾಸಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಕಿರುಕುಳ ನೀಡುವುದನ್ನು ನಮ್ಮ ಸರ್ಕಾರ ಒಪ್ಪಲ್ಲ.
ಶರಾವತಿ ಸಂತ್ರಸ್ಥರು ನಾಡಿಗೆ ಬೆಳಕು ಕೊಟ್ಟು ಈ ಭಾಗದಲ್ಲಿ ವಾಸವಾಗಿದ್ದಾರೆ.ಅವರಿಗೆ ಹಕ್ಕುಪತ್ರ ಕೊಡುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ ನಾವು ಮಾಡುತ್ತವೆ ಎಂದು ಹೇಳಿದರು.

Belur Gopalakrishna ಐದಾರು ದಶಕದಿಂದ ಬದುಕು ಕಟ್ಟಿಕೊಂಡ ರೈತರಿಗೆ ಕಿರುಕುಳ ನೀಡಿದ್ರೆ ಒಪ್ಪಲ್ಲ. ರೈತರ ಒತ್ತುವರಿ ತೆರವು ಸಂಬಂಧ ನನ್ನ ಗಮನಕ್ಕೆ ತಂದು ಕೆಲಸ ಮಾಡಿ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...