Thursday, June 18, 2026
Thursday, June 18, 2026

B. S. Yediyurappa ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗೆ – ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

Date:

B. S. Yediyurappa ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಎಐಸಿಸಿ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಮೇಲೆ ಅನಗತ್ಯವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.ಇವರ ಆಂತರಿಕ ಕಚ್ಚಾಟದಿಂದಾಗಿ ಅಭಿವೃದ್ದಿ ಕಾಮಗಾರಿಗಳು ನಿಂತುಹೋಗಿವೆ ಎಂದು ಆರೋಪಿಸಿದರು.

ಬೆಂಗಳೂರಿನ ಮಲ್ಲೇಶ್ವರಂ
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮಾತನಾಡಿ,ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸುರ್ಜೆವಾಲ ಮತ್ತು ಕೆ.ಸಿ.ವೇಣುಗೋಪಾಲ್ ಕರ್ನಾಟಕಕ್ಕೆ ಏಕಾಏಕಿ ಬಂದಿದ್ದು ಏಕೆ ಎಂಬುದು ಎಲ್ಲರಿಗೂ ಗೊತ್ತಿದೆ.ಸಚಿವರು ಮತ್ತು ಶಾಸಕರು ನಾಯಿನರಿಗಳ ತರ ಕಿತ್ತಾಡಿಕೊಳುತ್ತಿದ್ದಾರೆ. ಉಸ್ತುವಾರಿಗಳು ರಾಜ್ಯಕ್ಕೆ ಬರುವುದು ವಸೂಲಿಗೆ ಎಂಬುದು ಬಾಯ್ಬಿಟ್ಟು ಹೇಳಬೇಕೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ,ಅಧಿಕಾರಕ್ಕೆ ಬಂದು ಆರು ತಿಂಗಳಾಗಿದೆ. ಆದರೆ ಸರ್ಕಾರ ಮಾತ್ರ ಗಾಳಿಯಿಲ್ಲದೇ ಮುಂದೆ ಹೋಗುತ್ತಿಲ್ಲ.ತಮ್ಮ ಆಶ್ವಾಸನೆ ಈಡೇರಿಸಲು ಪರದಾಡುತ್ತಿದೆ*. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಚಿತ್ರ ಪರಿಸ್ಥಿತಿಯಲ್ಲಿದ್ದಾರೆ ಎಂದು ಹೇಳಿದ್ದಾರೆ.

B. S. Yediyurappa ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಶ್ರೀ ಡಾ.ಸಿ.ಎನ್.ಅಶ್ವಥ್ ನಾರಾಯಣರವರು,ಮಾಜಿ ಸಚಿವರಾದ ಶ್ರೀ ಗೋವಿಂದ ಆರ್ ಕಾರಜೋಳ್ ರವರು, ಶಾಸಕರಾದ ಶ್ರೀ ರಘುರವರು,ಶ್ರೀ ಎಸ್.ಆರ್.ವಿಶ್ವನಾಥ್ ರವರು, ವಿಧಾನಪರಿಷತ್ ಸದಸ್ಯ ಶ್ರೀ ರವಿಕುಮಾರ್ ರವರು,ರಾಜ್ಯಸಭಾ ಸದಸ್ಯ ಶ್ರೀ ಲೆಹರ್ ಸಿಂಗ್ ರವರು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...