Friday, March 20, 2026
Friday, March 20, 2026

District Consumer Disputes Redressal Commission ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ: ಪರಿಹಾರ ನೀಡಲು ಆದೇಶ

Date:

District Consumer Disputes Redressal Commission ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಪೀಠವು ರವಿಕುಮಾರ್ ವೈ.ಎಲ್ ಎಂಬುವವರು ಮಹಂತ ಮೋಟಾರ್ಸ್, ಶಿವಮೊಗ್ಗ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಪರಿಹಾರ ಒದಗಿಸಿ ಆದೇಶಿಸಿದೆ.
ಅರ್ಜಿದಾರ ರವಿಕುಮಾರ್ ವೈ.ಎಲ್ ರವರು ಎದುರಾರ ಮಹಿಂದ್ರಾ ಕಂಪನಿಗೆ ಸೇರಿದ ಸ್ಕಾರ್ಪಿಯೋ ಎನ್ ಝಡ್ 6 ಡೀಸೆಲ್ ಎಂಟಿ ವೈಟ್ ಕಲರ್ ಮಾದರಿಯ ಕಾರನ್ನು ರೂ.21,000 ಪಾವತಿಸಿ ದಿ: 06-08-2023 ರಂದು ಮುಂಗಡ ಬುಕ್ಕಿಂಗ್ ಮಾಡಿರುತ್ತಾರೆ. ಉತ್ಪಾದನಾ ಘಟಕದಲ್ಲಿ ತೊಂದರೆ ಉಂಟಾಗಿದೆ ಎಂದು ಕಾರಣ ನೀಡಿ ಎದುರುದಾರರು ವಾಹನ ನೀಡಿರುವುದಿಲ್ಲ. ಹಾಗೂ ಮುಂಗಡ ಹಣವನ್ನು ಕೂಡ ಮರಳಿ ನೀಡಿರುವುದಿಲ್ಲ.
ಈ ಕುರಿತು ಆಯೋಗದ ಮುಂದೆ ಸೂಕ್ತ ಪರಿಹಾರ ಕೋರಿ ಪ್ರಕರಣ ದಾಖಲಿಸಿದ್ದು, ಆಯೋಗದಿಂದ ಜಾರಿಗೊಳಿಸಿದ ನೋಟಿಸ್ಸಿಗೆ ಸಹ ಎದುರುದಾರರು ಕಲಾಪಕ್ಕೆ ಹಾಜರಾಗಿರದ ಕಾರಣ ಏಕಪಕ್ಷೀಯವಾಗಿ ವಿಚಾರಿಸಲಾಗಿರುತ್ತದೆ.
District Consumer Disputes Redressal Commission ಪ್ರಕರಣದ ಅಂಶಗಳು ಮತ್ತು ಅರ್ಜಿದಾರರು ಹಾಜರುಪಡಿಸಿದ ದಾಖಲೆಗಳನ್ನು ಪರಿಗಣಿಸಿ, ಪರಿಶೀಲಿಸಿದಾಗ ಎದುರುದಾರರ ಸೇವಾನ್ಯೂನ್ಯತೆ ಕಂಡುಬಂದಿದ್ದು ಪ್ರಸ್ತುತ ಪ್ರಕರಣವನ್ನು ಭಾಗಶಃ ಪುರಸ್ಕರಿಸಲಾಗಿರುತ್ತದೆ.
ಎದುರುದಾರರು ದೂರುದಾರರಿಂದ ಪಡೆದ ಮುಂಗಡ ಹಣ ರೂ.21,000 ಗಳನ್ನು ಶೇ.9 ಬಡ್ಡಿ ಸಮೇತ ಪಾವತಿಸಲು ಮತ್ತು ರೂ. 10,000 ಗಳನ್ನು ಮಾನಸಿಕ ಹಿಂಸೆ ಹಾಗೂ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಪರಿಹಾರವಾಗಿ ಹಾಗೂ ವ್ಯಾಜ್ಯದ ಖರ್ಚು ವೆಚ್ಚಗಳ ಬಾಬ್ತು ರೂ.10,000 ಗಳನ್ನು ಪಾವತಿಸಬೇಕೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ. ಶಿವಣ್ಣ, ಸದಸ್ಯರಾದ ಸವಿತಾ ಬಿ ಪಟ್ಟಣಶೆಟ್ಟಿ ಮತ್ತು ಬಿ.ಡಿ.ಯೋಗಾನಂದ ಇವರು ಪೀಠವು ದಿ: 3-10-2023 ರಂದು ಆದೇಶಿಸಿದೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...