Monday, February 2, 2026
Monday, February 2, 2026

Akashvani Bhadravati ಆಕಾಶವಾಣಿ ಭದ್ರಾವತಿಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮ

Date:

Akashvani Bhadravati ಆಕಾಶವಾಣಿ ಭದ್ರಾವತಿ (FM103.5 ಹಾಗೂ MW675z) ನವೆಂಬರ್ ತಿಂಗಳ ಪೂರ್ತಿ ಶಿವಮೊಗ್ಗ ದಾವಣಗೆರೆ ಹಾಗು ಚಿಕ್ಕಮಗಳೂರು ಜಿಲ್ಲೆಯ ಹೊರನಾಡ ಕನ್ನಡಿಗರ ಅನಿಸಿಕೆ ಧ್ವನಿಮುದ್ರಿಸಿ ಅವರಿಗಿರುವ ಕನ್ನಡದ ಪ್ರೀತಿ ಕುರಿತಂತೆ ‘ಹೊರನಾಡ ಕನ್ನಡಿಗರ ಕನ್ನಡ ಪ್ರೀತಿ’ ಕಾರ್ಯಕ್ರಮ ಸರಣಿಯನ್ನು ಪ್ರಸಾರಿಸಲಿದೆ. ಪ್ರತೀದಿನ ಬೆಳಿಗ್ಗೆ 9:35 ನಿಮಿಷಕ್ಕೆ ಪ್ರಸಾರವಾಗುವ ಈ ಸರಣಿಯಲ್ಲಿ ಹೊರನಾಡ ಕನ್ನಡಿಗರು ಭಾಗವಹಿಸಲು ಅವಕಾಶವಿದೆ. ಹೊರನಾಡ ಕನ್ನಡಿಗರು ತಮ್ಮ ಕನ್ನಡ ಪ್ರೀತಿಯನ್ನು ಧ್ವನಿಮುದ್ರಿಸಿ airbdvt@gmail.com ಮೈಲ್ ಗೆ ಕಳುಹಿಸಲು ಅವಕಾಶ ಕಲ್ಪಿಸಲಾಗಿದೆ. ನವೆಂಬರ್ ತಿಂಗಳ ಪೂರ್ತಿ ಪ್ರಸಾರವಾಗುವ ಈ ಕಾರ್ಯಕ್ರಮದೊಟ್ಟಿಗೆ ನವೆಂಬರ್ 01 ರಂದು ಬೆಳಿಗ್ಗೆ ಆಕಾಶವಾಣ ಹಾಗು ಶಿವಮೊಗ್ಗದ ಕರ್ನಾಟಕ ಸಂಘದ ಸಹಯೋಗದಲ್ಲಿ ಶ್ರೋತೃಗಳ ಸಮ್ಮುಖದಲ್ಲಿ ನಡೆದ “ಕವಿಕಾವ್ಯ ಗಾನಸುಧೆ” ವಿಶೇಷ ಕಾರ್ಯಕ್ರಮ ಬೆಳಿಗ್ಗೆ 9:00ಗಂಟೆಯಿಂದ 11ಗಂಟೆಯವರೆಗೆ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ ಹೆಸರಾಂತ 10 ಕವಿಗಳು ತಮ್ಮ ಕವನ ವಾಚನ ಮಾಡುವುದರೊಟ್ಟಿಗೆ ಸಂಗೀತ ಸಂಯೋಜಿಸಿ ಭಾವಗೀತೆಯನ್ನು ಪ್ರಸ್ತುತಪಡಿಸಲಾಗುವುದು. ನಾಡಗೀತೆಯಿಂದ ಆರಂಭವಾಗುವ ಈ ಕಾರ್ಯಕ್ರಮ ಸತತ 2 ಗಂಟೆಗಳ ಕಾಲ ಪ್ರಸಾರವಾಗಲಿದೆ.

Akashvani Bhadravati ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ FM103.5 ಹಾಗೂ MW675khz ನಲ್ಲಿ ಹಾಗೂ ವಿಶ್ವದಾದ್ಯಂತ Prasarbharati newsonair ಭದ್ರಾವತಿ ಕೇಂದ್ರದ ಮೂಲಕ ಪ್ರಸಾರ ಸಮಯದಲ್ಲಿ ಕೇಳಬಹುದು ಹಾಗೂ ಪ್ರಸಾರ ನಂತರ akashavani bhadravathi ನಲ್ಲಿ ಕೇಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...