Tuesday, December 16, 2025
Tuesday, December 16, 2025

Punit Rajkumar ಗಾಳಿಗುಡ್ಡೆ ಗ್ರಾಮದಲ್ಲಿ ನಟ ಪುನೀತ್ ಸ್ಮರಣಾರ್ಥ ಮೌನಾಚರಣೆ

Date:

Punit Rajkumar ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ತನ್ನದೇಯಾದ ಛಾಪುಮೂಡಿಸಿದ ನಟ ಪುನೀತ್‌ರಾಜ್ ಕುಮಾರ್ ಕನ್ನಡನಾಡಿನ ಪ್ರತಿಯೊಬ್ಬರ ಕಣ್ಮಣ ಎಂದು ಕಸಾಪ ಜಾಗರ ಹೋಬಳಿ ಗೌರವಾ ಧ್ಯಕ್ಷ ಕಳವಾಸೆ ರವಿ ಹೇಳಿದರು.
ತಾಲ್ಲೂಕಿನ ಗಾಳಿಗುಡ್ಡೆ ಗ್ರಾಮದಲ್ಲಿ ನಟ ಪುನೀತ್‌ರಾಜ್‌ಕುಮಾರ್ ಎರಡನೇ ವರ್ಷದ ಸ್ಮರಣಾರ್ಥ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಮೌನಾಚರಣೆ ನಡೆಸಿ ಮೆಚ್ಚಿನ ನಟನಿಗೆ ಗೌರವ ಸಮರ್ಪಿಸಿದರು.

ಪುನೀತ್‌ರಾಜ್‌ಕುಮಾರ್ ತಮ್ಮ ಬಾಲ್ಯದಿಂದಲೇ ಅಪ್ರತಿಮಾ ಕಲಾವಿದರಾಗಿದ್ದರು. ಬಳಿಕ ಯುವಸಮೂಹ ವನ್ನು ಪ್ರೇರೇಪಿಸುವ ಹಲವಾರು ಚಿತ್ರಗಳಲ್ಲಿ ನಟಿಸಿ ಪ್ರಶಸ್ತಿಗಳನ್ನು ಪಡೆದುಕೊಂಡು ಜನಮಾನಸದಲ್ಲಿ ಬೆರೆತ ಅಪ ರೂಪದ ನಟ ಎಂದು ಬಣ್ಣಿಸಿದರು.

ಕನ್ನಡ ನಾಡು, ನುಡಿ, ಜಲದ ಬಗ್ಗೆ ವಿಶೇಷ ಗೌರವ ಹೊಂದಿದ್ದ ಅವರು ಎಂದಿಗೂ ಪರಭಾಷೆಯತ್ತ ಮುಖ ಮಾಡದೇ ಕನ್ನಡತಾಯಿಯ ಸೇವೆಯಲ್ಲೇ ತೊಡಗಿದ ಕನ್ನಡ ಕಂಠೀರವ. ಸಿನಿಮಾರಂಗ ಹೊರತುಪಡಿಸಿ ಅನೇಕ ಸಾಮಾಜಿಕ ಚಟುವಟಿಕೆಗಳನ್ನು ನಡೆಸಿ ಎಲೆಮರೆಕಾಯಿ ಸೇವೆ ಸಲ್ಲಿಸಿದವರು ನಟ ಪುನೀತ್ ಎಂದು ಹೇಳಿದರು.
ಇಂದಿನ ಯುವಪೀಳಿಗೆ ಪುನೀತ್‌ರ ಏಕಾಗ್ರತೆ, ಶ್ರದ್ದೆ ಸೇರಿದಂತೆ ಇನ್ನಿತರ ಜೀವನಶೈಲಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನೆಡೆದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಆ ನಿಟ್ಟಿನಲ್ಲಿ ಕಸಾಪ, ಅಭಿಮಾನಿಬಳಗ ಹಾಗೂ ಗಾಳಿಗುಡ್ಡೆ ಗ್ರಾಮಸ್ಥರಿಂದ ಪ್ರತಿಮೆ ನಿರ್ಮಿಸಿ ಯುವಕರಿಗೆ ಪ್ರೇರೇಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

Punit Rajkumar ಈ ಸಂದರ್ಭದಲ್ಲಿ ಪುನೀತ್‌ರಾಜ್‌ಕುಮಾರ್ ಬಳಗದ ಮುಖಂಡರಾದ ಪ್ರಶಾಂತ್, ಚೇತನ್, ಕಿರಣ್, ಮಿಥುನ್, ಶೇಖರ್, ಜೈಕರ್ನಾಟಕ ಸಂಘಟನೆಯ ಆಕ್ಯಶ್, ಸಂತೋಷ್, ಗ್ರಾಮಸ್ಥರಾದ ಕೃಷ್ಣಪ್ಪ, ಶಂಕರ್, ಸತಿಶ್, ಸುಂದ್ರೇಶ್, ಶೇಖರಪ್ಪ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...