Monday, April 6, 2026
Monday, April 6, 2026

Road Accident ರಿಪ್ಪನ್ ಪೇಟೆಯಲ್ಲಿ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸಾವು: ಕುಟುಂಬಸ್ಥರಿಗೆ ಬೇಳೂರು ಗೋಪಾಲಕೃಷ್ಣ ಸಾಂತ್ವಾನ

Date:

Road Accident ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಕ್ಯಾಂಪ್ ನ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಹಿನ್ನಲೆಯಲ್ಲಿ ಸಾಗರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರು ಮೃತ ಯುವಕರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ನ.4 ಶನಿವಾರ ತಡರಾತ್ರಿ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಕ್ಯಾಂಪ್ ನಿವಾಸಿಗಳಾದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತಪಟ್ಟಿರುವ ವ್ಯಕ್ತಿಗಳು ಎಂದು ತಿಳಿದು ಬಂದಿದೆ.

ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಸ್ಪರ್ಧಾಳುಗಳಾಗಿ ಭಾಗವಹಿಸಲು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ನಡೆದಿತ್ತು.

Road Accident ನ್ಯಾರ್ಶಿ ತಿರುವಿನಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಕಂದಕದ ಗದ್ದೆಗೆ ಉರುಳಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...

Rotary Shivamogga ರಕ್ತದಾನವು ಮಹತ್ವದ ಸೇವೆ- ಡಿ.ಎಸ್.ಅರುಣ್

Rotary Shivamogga ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ, ರೋಟರಿ...