Siddaramaiah 2013-18ರ ನಮ್ಮ ಸರ್ಕಾರದ ಅವಧಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 125ನೇ ಜನ್ಮದಿನದ ಅಂಗವಾಗಿ ಅಂಬೇಡ್ಕರರ ಸಮಗ್ರ ಬರಹ ಮತ್ತು ಭಾಷಣಗಳನ್ನು 22 ಸಂಪುಟಗಳಲ್ಲಿ ಕುವೆಂಪು ಭಾಷಾ ಪ್ರಾಧಿಕಾರದ ಮೂಲಕ ಕನ್ನಡದಲ್ಲಿ ಮುದ್ರಿಸಿ, ರಾಜ್ಯದ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಉಚಿತವಾಗಿ ವಿತರಿಸಿತ್ತು. ಬಾಬಾ ಸಾಹೇಬರ ಬರಹಗಳನ್ನು ನಾಡಿನ ಪ್ರತಿಯೊಬ್ಬ ಕನ್ನಡಿಗನೂ ಕೂಡ ಮಾತೃಭಾಷೆಯಲ್ಲೇ ಓದಿ, ಅರ್ಥೈಸಿಕೊಂಡು ಅವರ ಆದರ್ಶಗಳನ್ನು ತನ್ನ ಬದುಕಿನಲ್ಲಿಯೂ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂಬುದು ನಮ್ಮ ಸದಾಶಯವಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
Siddaramaiah ಕನ್ನಡದ ನೆಲ, ಭಾಷೆ, ಸಂಸ್ಕೃತಿ, ಪರಂಪರೆ ಸೇರಿದಂತೆ ನಾಡಿನ ಅಸ್ಮಿತೆಯನ್ನು ಪೋಷಿಸಿ, ಬೆಳೆಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದ್ದಾರೆ.