Saturday, September 28, 2024
Saturday, September 28, 2024

Sagara Town Police Station ಜೀವ ಬೆದರಿಕೆ ಪ್ರಕರಣ ಮಾಜಿ ಸಚಿವ ಹಾಲಪ್ಪ ಸೇರಿದಂತೆ 43 ಜನರ ವಿರುದ್ಧ ಎಫ್ಐಆರ್ ದಾಖಲು

Date:

Sagara Town Police Station ಸಾಗರದ ಜನತಾ ಶಾಲೆಯ ಎದುರಿನ ನಿವೇಶನಕ್ಕೆ ಸಂಬಂಧಿಸಿದಂತೆ ಜುಲೈ 10ರಂದು ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮಾಜಿ ಸಚಿವರಾದ ಹರತಾಳು ಹಾಲಪ್ಪ ಸೇರಿದಂತೆ 43 ಜನರ ವಿರುದ್ಧ ಕೋರ್ಟ್ ಆದೇಶದಂತೆ ಸಾಗರದ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಾದ ವಿಜಯ ಕುಮಾರ್ ಪಾಟೀಲ್ ಅವರು ಪ್ರತಿಭಟನಾಕಾರರಿಗೆ ಮಾನ್ಯ ನ್ಯಾಯಾಲಯದ ಹಂಗಾಮಿ ಪ್ರತಿಬಂಧಕ ಆದೇಶವನ್ನು ತೋರಿಸಿದರು.

ಪ್ರತಿಭಟನಾಕಾರರು ನ್ಯಾಯಾಲಯದ ಹಂಗಾಮಿ ಆದೇಶವನ್ನು ಉಲ್ಲಂಘನೆ ಮಾಡಿ ಅತಿಕ್ರಮ ಪ್ರವೇಶ ಮಾಡಿ ದೂರುದಾರರಿಗೆ ಕೊಲೆ ಬೆದರಿಕೆ ಹಾಕಿ, ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾರೆಂದು ಹಾಗೂ ನನ್ನ ಸ್ವತ್ತಿನಿಂದ ನನ್ನನ್ನು ಹೊರ ಹಾಕಬೇಕೆಂಬ ಉದ್ದೇಶದಿಂದ ಗುಂಪು ಕಟ್ಟಿಕೊಂಡು ಬಂದು ನನ್ನ ಜಾಗದಲ್ಲಿ ಅಶಾಂತಿಯನ್ನು ಉಂಟು ಮಾಡಿದ್ದಾರೆ.

ಐದನೇ ಆರೋಪಿಯಾದ ಮಾಜಿ ಸಚಿವ ಹೆಚ್.ಹಾಲಪ್ಪ ಹರತಾಳರವರು ನಾನು ಮಾಜಿ ಸಚಿವನಿದ್ದೇನೆ ಎಷ್ಟು ಕೇಸು ನೋಡಿಲ್ಲ ಎಂದು ದೂರುದಾರನಿಗೆ ಜೀವ ಬೆದರಿಕೆ ಹಾಕಿ ಮಾಧ್ಯಮದ ಎದುರು ಸುಳ್ಳು ಭಾಷಣ ಮಾಡಿರುತ್ತಾರೆಂದು ದೂರುದಾರರು ದೂರಿನಲ್ಲಿ ಉಲ್ಲೇಖಿಸಿರುತ್ತಾರೆ.

Sagara Town Police Station ಪ್ರಕರಣದಲ್ಲಿ ಹಾಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿಡಿ ಮೇಘರಾಜ್ ರವರು ಹಾಗೂ ಮಾಜಿ ನಗರಸಭೆ ಅಧ್ಯಕ್ಷರಾದ ಮಧುರ ಶಿವಾನಂದ ಅವರು ಹಾಗೂ ಸಾಗರ ನಗರ ಬಿಜೆಪಿ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಅವರು ಹಾಗೂ ಹಾಲಪ್ಪನವರ ಬೆಂಬಲಿಗರಾದ ರವಿ ಬಸರಾಣಿ, ಹಾಗೂ ನಗರಸಭೆ ಸದಸ್ಯರು ಸೇರಿದಂತೆ 43 ಜನರ ವಿರುದ್ಧ IPC sec 1860 (u/s 141, 143, 147, 148, 441, 447, 427, 504, 506, 149) ರ ಪ್ರಕಾರ ಕೋರ್ಟ್ ಆದೇಶದ ಮೇರೆಗೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...