Monday, February 16, 2026
Monday, February 16, 2026

Siddaramaiah ಗ್ರಾಮ ಸ್ವರಾಜ್ಯ ಗಾಂಧಿ ಅವರ ಕನಸು – ಸಿ ಎಂ ಸಿದ್ದರಾಮಯ್ಯ

Date:

Siddaramaiah ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ “ಸೇವಾದಳ ಶತಮಾನೋತ್ಸವ ಮತ್ತು ರಾಜ್ಯ ಮಟ್ಟದ ಸಮ್ಮೇಳನ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ನಂತರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,
ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ. ಕಾಂಗ್ರೆಸ್ ಪಕ್ಷ ಮತ್ತು ಸೇವಾದಳ ಮಾತ್ರ ಸಾಮಾಜಿಕ ನ್ಯಾಯ, ಹೋರಾಟ, ದೇಶದ ಸಮಗ್ರತೆ ಬಗ್ಗೆ ನಂಬಿಕೆ ಇಟ್ಟಕೊಂಡು ದೇಶವನ್ನು, ಸಮಾಜವನ್ನು ಬೆಸೆಯುವ ಕೆಲಸ ಮಾಡುತ್ತಿದೆ.
ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡ ಚರಿತ್ರೆಯಾಗಲಿ, ಇತಿಹಾಸವಾಗಲಿ ಇಲ್ಲ. ಸೇವಾದಳ ತ್ಯಾಗ ಬಲಿದಾನಗಳ ಮೂಲಕ‌ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿತು.
ಗ್ರಾಮ ಸ್ವರಾಜ್ಯ ಮಹಾತ್ಮ ಗಾಂಧಿ ಅವರ ಕನಸು. ನೆಹರೂ ಮತ್ತು ಇಂದಿರಾಗಾಂಧಿ ಅವರ ಕಾಲದಲ್ಲಿ ಗ್ರಾಮಗಳ ಪ್ರಗತಿಗೆ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡರು. ನಮ್ಮ ಸರ್ಕಾರ ಕೂಡ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಚುನಾವಣೆಯಲ್ಲಿ ನಾವು ಕೊಟ್ಟ ಎಲ್ಲಾ ಭರವಸೆಗಳನ್ನೂ ಹಿಂದಿನ ಬಾರಿಯೂ ಈಡೇರಿಸಿದ್ದೇವೆ. ಈ ಬಾರಿಯೂ ಈಡೇರಿಸುತ್ತಲೇ ಇದ್ದೇವೆ ಎಂದರು.

Siddaramaiah ಸೇವಾದಳ ಕಾರ್ಯಕರ್ತರ ನಿಸ್ವಾರ್ಥ ಸೇವೆಯಿಂದ, ಪ್ರಾಮಾಣಿಕ ಹೋರಾಟದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಬುಡಸಮೇತ ಕಿತ್ತೊಗೆದು ಭಾರತವನ್ನು ಕಾಪಾಡಿಕೊಳ್ಳುವ ರಾಹುಲ್ ಗಾಂಧಿ ಅವರ ಗುರಿಯನ್ನು ಸಾಧಿಸಬೇಕು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navyashree Eeshwaravan Charitable Trust ಒಬ್ಬರ ಪ್ರಾಣವುಳಿಸಿದ ಪುಣ್ಯ ರಕ್ತದಾನದಿಂದ ಬರುತ್ತದೆ- ನವ್ಯಶ್ರೀ ನಾಗೇಶ್

ನೊಂದವರು, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಪರಶಿವನ ಅನುಗ್ರಹ ಪಡೆಯಬಹುದು. ಮತ್ತೊಬ್ಬರ ಜೀವ...

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...