Monday, February 2, 2026
Monday, February 2, 2026

Crop Destruction ಶಿವಮೊಗ್ಗದಲ್ಲಿ ಮತ್ತೇ ಹೆಚ್ಚಿದ ಮಾನವ- ವನ್ಯಜೀವಿಗಳ ಸಂಘರ್ಷ

Date:

Crop Destruction ಮಲೆನಾಡಿನ ಹಲವೆಡೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ.

ಶಿವಮೊಗ್ಗದಲ್ಲಿ ಮತ್ತೇ ಮಾನವ- ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದೆ.

ಬರದ ನಡುವೆ ಬಂದಿದ್ದ ಅಲ್ಪಸ್ವಲ್ಪ ಬೆಳೆಯೂ ಇದೀಗ ವನ್ಯಜೀವಿಗಳ ಪಾಲಾಗುತ್ತಿದೆ.

ರೈತರ ಜಮೀನಿಗೆ ಕಾಡಾನೆ ನುಗ್ಗಿ ಬೆಳೆ ನಾಶವಾಗುತ್ತಿದೆ.

ಶಿವಮೊಗ್ಗದ ಮಲೆಶಂಕರ, ಮಂಜರಿಕೊಪ್ಪ ಗ್ರಾಮದಲ್ಲಿ ಕಾಡಾನೆಗಳು ಹಿಂಡು- ಹಿಂಡಾಗಿ ದಾಳಿ ನಡೆಸಿವೆ.

ಪುರದಾಳು ಗ್ರಾ.ಪಂ ವ್ಯಾಪ್ತಿಯ ನಾಗಮ್ಮ ಕಾಲೋನಿ, ದುರ್ಗಾಂಬ ಕಾಲೋನಿಯಲ್ಲೂ ಕಾಡಾನೆ ದಾಳಿ ನಡೆಸಿವೆ.

ಭತ್ತ, ಅಡಿಕೆ, ಬಾಳೆ, ಜೋಳ, ಶುಂಠಿ ಸೇರಿದಂತೆ ಇನ್ನು ಇತರೆ ಬೆಳೆಗಳನ್ನ ಕಾಡಾನೆ ಹಿಂಡು ನಾಶ ಪಡಿಸಿವೆ.

ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಮರಗಳ ಮೇಲೆ ವಾಚ್ ಟವರ್ ನಿರ್ಮಿಸಿ ತಾವು ಬೆಳೆದ ಕಾಯುವ ಪರಿಸ್ಥಿತಿ ಬಂದಿದೆ.

ಕಾಡಾನೆಗಳ ಹಿಂಡು ಭದ್ರಾ ಅಭಯಾರಣ್ಯದಿಂದ ಬಂದು

ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಹೊಂದಿಕೊಂಡ ಗ್ರಾಮಗಳಲ್ಲಿ ನಿರಂತರವಾಗಿ ದಾಳಿ ಮಾಡುತ್ತಿವೆ.

ಇದರಿಂದ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳ ರೈತರಲ್ಲಿ ಆತಂಕ ಹೆಚ್ಚಿದೆ.

Crop Destruction ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ ಗಾಯದ ಮೇಲೆ ಬರೆ ಎಳೆಯುತ್ತಿರುವ ಪರಿಸ್ಥಿತಿ ಆಗಿದೆ.

ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...