Monday, December 15, 2025
Monday, December 15, 2025

Crop Destruction ಶಿವಮೊಗ್ಗದಲ್ಲಿ ಮತ್ತೇ ಹೆಚ್ಚಿದ ಮಾನವ- ವನ್ಯಜೀವಿಗಳ ಸಂಘರ್ಷ

Date:

Crop Destruction ಮಲೆನಾಡಿನ ಹಲವೆಡೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ.

ಶಿವಮೊಗ್ಗದಲ್ಲಿ ಮತ್ತೇ ಮಾನವ- ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದೆ.

ಬರದ ನಡುವೆ ಬಂದಿದ್ದ ಅಲ್ಪಸ್ವಲ್ಪ ಬೆಳೆಯೂ ಇದೀಗ ವನ್ಯಜೀವಿಗಳ ಪಾಲಾಗುತ್ತಿದೆ.

ರೈತರ ಜಮೀನಿಗೆ ಕಾಡಾನೆ ನುಗ್ಗಿ ಬೆಳೆ ನಾಶವಾಗುತ್ತಿದೆ.

ಶಿವಮೊಗ್ಗದ ಮಲೆಶಂಕರ, ಮಂಜರಿಕೊಪ್ಪ ಗ್ರಾಮದಲ್ಲಿ ಕಾಡಾನೆಗಳು ಹಿಂಡು- ಹಿಂಡಾಗಿ ದಾಳಿ ನಡೆಸಿವೆ.

ಪುರದಾಳು ಗ್ರಾ.ಪಂ ವ್ಯಾಪ್ತಿಯ ನಾಗಮ್ಮ ಕಾಲೋನಿ, ದುರ್ಗಾಂಬ ಕಾಲೋನಿಯಲ್ಲೂ ಕಾಡಾನೆ ದಾಳಿ ನಡೆಸಿವೆ.

ಭತ್ತ, ಅಡಿಕೆ, ಬಾಳೆ, ಜೋಳ, ಶುಂಠಿ ಸೇರಿದಂತೆ ಇನ್ನು ಇತರೆ ಬೆಳೆಗಳನ್ನ ಕಾಡಾನೆ ಹಿಂಡು ನಾಶ ಪಡಿಸಿವೆ.

ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಮರಗಳ ಮೇಲೆ ವಾಚ್ ಟವರ್ ನಿರ್ಮಿಸಿ ತಾವು ಬೆಳೆದ ಕಾಯುವ ಪರಿಸ್ಥಿತಿ ಬಂದಿದೆ.

ಕಾಡಾನೆಗಳ ಹಿಂಡು ಭದ್ರಾ ಅಭಯಾರಣ್ಯದಿಂದ ಬಂದು

ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಹೊಂದಿಕೊಂಡ ಗ್ರಾಮಗಳಲ್ಲಿ ನಿರಂತರವಾಗಿ ದಾಳಿ ಮಾಡುತ್ತಿವೆ.

ಇದರಿಂದ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳ ರೈತರಲ್ಲಿ ಆತಂಕ ಹೆಚ್ಚಿದೆ.

Crop Destruction ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ ಗಾಯದ ಮೇಲೆ ಬರೆ ಎಳೆಯುತ್ತಿರುವ ಪರಿಸ್ಥಿತಿ ಆಗಿದೆ.

ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...