Friday, April 18, 2025
Friday, April 18, 2025

Deepavali Festival ಗೋಪೂಜೆಯಿಂದ ಮನಸ್ಸಿಗೆ ಶಾಂತಿ ನೆಮ್ಮದಿ

Date:

Deepavali Festival ಗೋವಿನ ಪೂಜೆ ಮಾಡುವುದರಿಂದ ಕೋಟ್ಯಾಂತರ ದೇವರ ಪೂಜಿಸಿದ ಪುಣ್ಯ ಪ್ರಾಪ್ತಿ ಆಗುವ ಜೊತೆಯಲ್ಲಿ ಮನಸ್ಸಿಗೆ ಶಾಂತಿ ನೆಮ್ಮದಿ ಲಭಿಸುತ್ತದೆ. ಆರೋಗ್ಯಯುವ ಜೀವನಶೈಲಿ ನಮ್ಮದಾಗುತ್ತದೆ ಎಂದು ಜ್ಞಾನೇಶ್ವರಿ ಗೋಶಾಲೆಯ ಅಧ್ಯಕ್ಷ ಚಂದ್ರಹಾಸ ಪಿ ರಾಯ್ಕರ್ ಹೇಳಿದರು.

ದೀಪಾವಳಿ ಬಲಿಪಾಡ್ಯಮಿ ಪ್ರಯುಕ್ತ ಹುಣಸೋಡು ಗ್ರಾಮದಲ್ಲಿ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ ಸಂಕಲ್ಪದಂತೆ ಜ್ಞಾನೇಶ್ವರಿ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿ ಮಾತನಾಡಿ, ಗೋವುಗಳು ಕಾಮಧೇನು ಇದ್ದಂತೆ, ಪ್ರತಿ ದಿನ ಹಾಲು ಕರುಣಿಸುವ ಗೋಮಾತೆಯನ್ನು ಪ್ರತಿಯೊಬ್ಬರೂ ಪೂಜಿಸುವುದರಿಂದ ಸಕಲವು ಒಳಿತಾಗುತ್ತದೆ ಎಂದು ತಿಳಿಸಿದರು.

ಬಿಡಾಡಿ ಗೋವುಗಳು ಹಾಗೂ ಅಪಘಾತದಲ್ಲಿ ಗಾಯಗೊಂಡ ಜಾನುವಾರುಗಳನ್ನು ಜ್ಞಾನೇಶ್ವರಿ ಗೋಶಾಲೆಯಲ್ಲಿ ಚಿಕಿತ್ಸೆ ನೀಡಿ ಗುಣಪಡಿಸಲಾಗುತ್ತದೆ. ಎಲ್ಲ ಟ್ರಸ್ಟಿಗಳ ಸಹಕಾರದಿಂದ ತುಂಬಾ ಉತ್ತಮವಾಗಿ ಗೋಶಾಲೆಯು ನಡೆಯುತ್ತಿದೆ ಎಂದರು.

ಜನ್ಮದಿನ, ವಿವಾಹ ವಾರ್ಷಿಕೋತ್ಸವ ಸೇರಿದಂತೆ ವಿಶೇಷ ಸಂದರ್ಭದಲ್ಲಿ ಸಾರ್ವಜನಿಕರು ಗೋಶಾಲೆಗೆ ಹುಲ್ಲು, ಹಿಂಡಿ, ಮೇವು, ಬಾಳೆಹಣ್ಣು, ಬೆಲ್ಲ, ಅಕ್ಕಿ ಸೇರಿದಂತೆ ನೆರವು ನೀಡಬಹುದಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್ ಮಾತನಾಡಿ, ಗೋವುಗಳ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಜವಾಬ್ದಾರಿ ಕರ್ತವ್ಯ. ಸಮಾಜಮುಖಿ ಹಾಗೂ ಪವಿತ್ರವಾದ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

Deepavali Festival ಗೋಪೂಜೆ ಪ್ರಯುಕ್ತ 156 ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು. ಉಪಾಧ್ಯಕ್ಷ ಪ್ರಶಾಂತ್ ರಾಯ್ಕರ್, ಕಾರ್ಯದರ್ಶಿ ಗುರುರಾಜ್ ಎಂ ಶೇಟ್, ಖಜಾಂಚಿ ಗಣೇಶ್ ಆರ್., ಸತೀಶ್, ಕಮಲಾಕ್ಷ, ದೇವಿದಾಸ್ ಶೇಟ್, ಪಾಂಡುರoಗ ಶೇಟ್, ಪಾಂಡುರoಗ ಶೇಟ್, ಸಂತೋಷ್, ವಿಜಯ ರಾಯ್ಕರ್, ಶೇಷಾದ್ರಿ, ರಾಘವೇಂದ್ರ ಕೆ, ಮಹಾನಗರ ಪಾಲಿಕೆ ಸದಸ್ಯ ವಿಶ್ವಾಸ್, ಬಿಂದು ವಿಜಯ್‌ಕುಮಾರ್, ಗೌರಿ ಗುರುರಾಜ್, ಶ್ರೀಪಾದ ರೇವಣಕರ್, ರಾಧಾಕೃಷ್ಣ ರಾಯ್ಕರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...