Saturday, December 6, 2025
Saturday, December 6, 2025

All India Cooperative Week celebration ಜನತೆಗೆ ಸಾಲ ಸೌಲಭ್ಯ ನೀಡುತ್ತಾ, ದೇಶದ ಆರ್ಥಿಕ ಬಲವರ್ಧನೆಗೆ ಸಹಕಾರ – ಬಸವರಾಜ್ ಶೇಟ್

Date:

All India Cooperative Week celebration ರೈತರಿಗೆ ಹಾಗೂ ಜನತೆಗೆ ಸಾಲ ಸೌಲಭ್ಯ ನೀಡುತ್ತಾ ದೇಶದ ಆರ್ಥಿಕ ಬಲವರ್ಧನೆಯಲ್ಲಿ ಸಹಕಾರ ರಂಗದ ಕೊಡುಗೆ ಅಪಾರವಾಗಿದೆ ಎಂದು ಶ್ರೀ ರಂಗನಾಥ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಬಂದಗಿ ಬಸವರಾಜ ಶೇಟ್ ಹೇಳಿದರು.

ಸೊರಬ ಪಟ್ಟಣದ ಶ್ರೀ ರಂಗನಾಥ ವಿವಿಧೋದ್ದೇಶ ಸಹಕಾರ ಸಂಘದ ಆವರಣದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಹಕಾರಿ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗಿದ್ದು, ಬ್ಯಾಂಕಿoಗ್ ಕ್ಷೇತ್ರಕ್ಕೆ ಬಹುದೊಡ್ಡ ಶಕ್ತಿಯಾಗಿ ಬೆಳೆದಿದೆ. ಸರ್ಕಾರದ ಅನುದಾನಗಳನ್ನು ನೂರಕ್ಕೆ ನೂರರಷ್ಟು ಸಹಕಾರಿ ಕ್ಷೇತ್ರವೂ ಜನತೆಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಪಟ್ಟಣದ ಶ್ರೀ ರಂಗನಾಥ ವಿವಿಧೋದ್ದೇಶ ಸಹಕಾರ ಸಂಘವು ಶತಮಾನವನ್ನು ಪೂರೈಸಿದ್ದು, ರೈತರು ಹಾಗೂ ಜನತೆಗೆ ಸಹಕಾರ ನೀಡುವ ಜೊತೆಗೆ ಸಾಲಸೌಲಭ್ಯಗಳನ್ನು ನೀಡುತ್ತಾ ಬರುತ್ತಿದೆ. ಮಾತ್ರವಲ್ಲದೇ ಸಂಘವೂ ಸಹ ವರ್ಷದಿಂದ ವರ್ಷಕ್ಕೆ ಆರ್ಥಿಕವಾಗಿ ಬೆಳವಣಿಗೆ ಹೊಂದುತ್ತಿದೆ ಎಂದರು.

ಸಂಘದ ಗೋದಮು ಶಿಥಿಲಾವ್ಯಸ್ಥೆಯದ್ದು, ನೂತನ ಕಟ್ಟಡ ನಿರ್ಮಾಣ ಮಾಡಲಾಗುವುದು. ಪಟ್ಟಣದಲ್ಲಿಯೇ ಶತಮಾನ ಕಂಡಿರುವ ಏಕೈಕ ಸಂಘವಾಗಿದ್ದು, ಈಗಾಗಲೇ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಲಾಗಿದೆ. ಸಹಕಾರ ಸಂಘದ ಬೆಳವಣಿಗೆಗೆ ಪ್ರತಿಯೊಬ್ಬರ ಸಹಕಾರವೂ ಅಗತ್ಯವಿದೆ ಹಾಗೂ ದೇಶದ ಆರ್ಥಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರವೂ ಸಹ ಪೂರಕವಾಗಿದೆ ಎಂದರು.

All India Cooperative Week celebration ಶ್ರೀ ರಂಗನಾಥ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಖಾಳೆ, ನಿರ್ದೇಶಕರಾದ ದತ್ತಾತ್ರೇಯ ಪುರಾಣಿಕ್, ನೆಮ್ಮದಿ ಶ್ರೀಧರ್, ಸಂಘದ ಕಾರ್ಯದರ್ಶಿ ಆರ್. ರವಿಕುಮಾರ್, ಆಂತರಿಕ ಲೆಕ್ಕಪರಿಶೋಧಕ ಕೆ. ರಾಜಶೇಖರಪ್ಪ, ಸಿಬ್ಬಂದಿ ಶಿವಕುಮಾರ್ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...