Thursday, March 19, 2026
Thursday, March 19, 2026

All India Cooperative Week celebration ಜನತೆಗೆ ಸಾಲ ಸೌಲಭ್ಯ ನೀಡುತ್ತಾ, ದೇಶದ ಆರ್ಥಿಕ ಬಲವರ್ಧನೆಗೆ ಸಹಕಾರ – ಬಸವರಾಜ್ ಶೇಟ್

Date:

All India Cooperative Week celebration ರೈತರಿಗೆ ಹಾಗೂ ಜನತೆಗೆ ಸಾಲ ಸೌಲಭ್ಯ ನೀಡುತ್ತಾ ದೇಶದ ಆರ್ಥಿಕ ಬಲವರ್ಧನೆಯಲ್ಲಿ ಸಹಕಾರ ರಂಗದ ಕೊಡುಗೆ ಅಪಾರವಾಗಿದೆ ಎಂದು ಶ್ರೀ ರಂಗನಾಥ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಬಂದಗಿ ಬಸವರಾಜ ಶೇಟ್ ಹೇಳಿದರು.

ಸೊರಬ ಪಟ್ಟಣದ ಶ್ರೀ ರಂಗನಾಥ ವಿವಿಧೋದ್ದೇಶ ಸಹಕಾರ ಸಂಘದ ಆವರಣದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಹಕಾರಿ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗಿದ್ದು, ಬ್ಯಾಂಕಿoಗ್ ಕ್ಷೇತ್ರಕ್ಕೆ ಬಹುದೊಡ್ಡ ಶಕ್ತಿಯಾಗಿ ಬೆಳೆದಿದೆ. ಸರ್ಕಾರದ ಅನುದಾನಗಳನ್ನು ನೂರಕ್ಕೆ ನೂರರಷ್ಟು ಸಹಕಾರಿ ಕ್ಷೇತ್ರವೂ ಜನತೆಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಪಟ್ಟಣದ ಶ್ರೀ ರಂಗನಾಥ ವಿವಿಧೋದ್ದೇಶ ಸಹಕಾರ ಸಂಘವು ಶತಮಾನವನ್ನು ಪೂರೈಸಿದ್ದು, ರೈತರು ಹಾಗೂ ಜನತೆಗೆ ಸಹಕಾರ ನೀಡುವ ಜೊತೆಗೆ ಸಾಲಸೌಲಭ್ಯಗಳನ್ನು ನೀಡುತ್ತಾ ಬರುತ್ತಿದೆ. ಮಾತ್ರವಲ್ಲದೇ ಸಂಘವೂ ಸಹ ವರ್ಷದಿಂದ ವರ್ಷಕ್ಕೆ ಆರ್ಥಿಕವಾಗಿ ಬೆಳವಣಿಗೆ ಹೊಂದುತ್ತಿದೆ ಎಂದರು.

ಸಂಘದ ಗೋದಮು ಶಿಥಿಲಾವ್ಯಸ್ಥೆಯದ್ದು, ನೂತನ ಕಟ್ಟಡ ನಿರ್ಮಾಣ ಮಾಡಲಾಗುವುದು. ಪಟ್ಟಣದಲ್ಲಿಯೇ ಶತಮಾನ ಕಂಡಿರುವ ಏಕೈಕ ಸಂಘವಾಗಿದ್ದು, ಈಗಾಗಲೇ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಲಾಗಿದೆ. ಸಹಕಾರ ಸಂಘದ ಬೆಳವಣಿಗೆಗೆ ಪ್ರತಿಯೊಬ್ಬರ ಸಹಕಾರವೂ ಅಗತ್ಯವಿದೆ ಹಾಗೂ ದೇಶದ ಆರ್ಥಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರವೂ ಸಹ ಪೂರಕವಾಗಿದೆ ಎಂದರು.

All India Cooperative Week celebration ಶ್ರೀ ರಂಗನಾಥ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಖಾಳೆ, ನಿರ್ದೇಶಕರಾದ ದತ್ತಾತ್ರೇಯ ಪುರಾಣಿಕ್, ನೆಮ್ಮದಿ ಶ್ರೀಧರ್, ಸಂಘದ ಕಾರ್ಯದರ್ಶಿ ಆರ್. ರವಿಕುಮಾರ್, ಆಂತರಿಕ ಲೆಕ್ಕಪರಿಶೋಧಕ ಕೆ. ರಾಜಶೇಖರಪ್ಪ, ಸಿಬ್ಬಂದಿ ಶಿವಕುಮಾರ್ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...