Wednesday, July 16, 2025
Wednesday, July 16, 2025

Shimoga District Chamber of Commerce & Industry ಪ್ರವಾಸದ ಅವಕಾಶಗಳನ್ನ ಸದುಪಯೋಗಪಡಿಸಿಕೊಳ್ಳ ಬೇಕು- ಎನ್.ಗೋಪಿನಾಥ್

Date:

Shimoga District Chamber of Commerce & Industry ದೇಶದ ಪ್ರಸಿದ್ದ ಕ್ಷೇತ್ರಗಳ ದರ್ಶನಕ್ಕೆ ಅತ್ಯಂತ ಕಡಿಮೆ ವೆಚ್ಛದಲ್ಲಿ ಉತ್ಕೃಷ್ಟ ಪ್ರವಾಸ ಆಯೋಜಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.


ಶಿವಮೊಗ್ಗ ನಗರದಿಂದ ಪ್ರವಾಸಕ್ಕೆ ಹೊರಟವರಿಗೆ ಬಿಳ್ಕೋಡುಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ವೇದಿಕೆ, ಯೂತ್ ಹಾಸ್ಟೇಲ್ಸ್ ತರುಣೋದಯ ಘಟಕ, ಸಾಹಸ ಮತ್ತು ಸಂಸ್ಕೃತಿ ವತಿಯಿಂದ ಸಂಯುಕ್ತವಾಗಿ ಪ್ರವಾಸ ಹಮ್ಮಿಕೊಂಡಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ಜನತೆಗೆ ಅತ್ಯುತ್ತಮ ಅನುಭವ ಮತ್ತು ಉತ್ತಮ ಅವಕಾಶ ಮಾಡಿ ಕೊಡುವ ಉದ್ದೇಶದಿಂದ ಹೊರ ರಾಜ್ಯ ಹಾಗೂ ದೇಶಗಳಿಗೂ ಪ್ರವಾಸ ಏರ್ಪಡಿಸಲಾಗುತ್ತಿದೆ. ಅದರ ಪ್ರಯೋಜನ ಪಡೆಯಬೇಕು. ಇನ್ನೂ ಹೆಚ್ಚಿನ ಯಶಸ್ಸು ಕಾಣಲು ಸಹಕರಿಸಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ವೈವಿಧ್ಯ ಪ್ರಸಿದ್ದ ಪ್ರವಾಸಿ ತಾಣಗಳಿದ್ದು, ಶಿವಮೊಗ್ಗ ಜಿಲ್ಲೆಯ ಸ್ಥಳಗಳಿಗೂ ಪ್ರವಾಸಿಗರು ಬರುವಂತಾಗಬೇಕು. ಪ್ರವಾಸಿತಾಣ ಜೀವಂತಿಕೆಯಿಂದ ಇರಬೇಕಾದರೆ ಚಟುವಟಿಕೆಯಿಂದ ಕೂಡಿರಬೇಕು ಎಂದರು.


Shimoga District Chamber of Commerce & Industry ಯೂತ್ ಹಾಸ್ಟೇಲ್ಸ್ ಚೇರ‍್ಮನ್ ವಾಗೇಶ್ ಮಾತನಾಡಿ, ಪ್ರತಿಯೊಬ್ಬರು ಚಾರಣ ಹಾಗೂ ಪ್ರವಾಸಗಳನ್ನು ಕಾಲಕಾಲಕ್ಕೆ ಕೈಗೊಳ್ಳಬೇಕು. ಯೂತ್ ಹಾಸ್ಟೆಲ್ ವತಿಯಿಂದ ನಿರಂತರವಾಗಿ ಚಾರಣ ಹಾಗೂ ಪ್ರವಾಸಗಳನ್ನು ಏರ್ಪಡಿಸಲಾಗುವುದು. ಇದರಿಂದ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಪ್ರಸಿದ್ದಿ ಪಡೆದ ಪ್ರವಾಸಿತಾಣಗಳನ್ನು ಜನಸಾಮಾನ್ಯರಿಗೆ ನೋಡಲು ಸಾಧ್ಯವಾಗುತ್ತದೆ ಎಂದರು.
ಬೀಳ್ಕೊಡುಗೆ ಸಮಾರಂಭದಲ್ಲಿ ಅ.ನಾ.ವಿಜಯೇಂದ್ರ, ಜಿ.ವಿಜಯಕುಮಾರ್, ಮಲ್ಲಿಕಾರ್ಜುನ್, ಪ್ರೇಮಕುಮಾರ್, ಲಕ್ಷ್ಮೀ, ಶಿವಶಂಕರ ಶಾಸ್ತ್ರೀ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಸಿಎಂ ಸಿದ್ಧರಾಮಯ್ಯ ಅವರ ಪತ್ರಕ್ಕೆ ಕೇಂದ್ರ ಸಚಿವ ಗಡ್ಕರಿ ಅವರ ಪತ್ರ- ಪ್ರತಿಕ್ರಿಯೆ

CM Siddaramaiah ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ,...