Monday, February 2, 2026
Monday, February 2, 2026

Siddaramaiah ಸಾಧಿಸಿದ್ದು ಹಲವು.ಸಾಗಬೇಕಾದ ಹಾದಿ ಬಹುದೂರ ಇದೆ-ಸಿದ್ಧರಾಮಯ್ಯ

Date:

Siddaramaiah ಶಿಕ್ಷಣ ಪೂರ್ತಿಗೊಳಿಸಿದ ಪದವೀಧರ ಯುವಜನರಿಗೆ ಉದ್ಯೋಗ ಹುಡುಕಿಕೊಳ್ಳಲು ಅಗತ್ಯ ಸಮಯ ದೊರಕಬೇಕು ಮತ್ತು ಈ ಅವಧಿಯಲ್ಲಿ ಅವರು ಹತಾಶೆ, ಒತ್ತಡಗಳಿಗೆ ಒಳಗಾಗದೆ ತಮ್ಮಿಷ್ಟದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಸಾಕಷ್ಟು ಅವಕಾಶ ಸಿಗಬೇಕು. ಇದು ಸಾಧ್ಯವಾಗಬೇಕಾದರೆ ನಿರುದ್ಯೋಗದಿಂದ ಎದುರಾಗುವ ಆರ್ಥಿಕ ಸಮಸ್ಯೆಗಳು ಅವರನ್ನು ಬಾಧಿಸದಂತೆ ತಡೆಯಬೇಕು. ಈ ಕಾರಣಕ್ಕಾಗಿ ನಾವು ಪದವೀಧರ ಮತ್ತು ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ನಿರುದ್ಯೋಗ ಭತ್ಯೆ ಒದಗಿಸುವ ಯುವನಿಧಿ ಯೋಜನೆಗೆ ಸರ್ಕಾರ ಜಾರಿಗೆ ಬಂದ ನಂತರದ ಮೊದಲ ಸಂಪುಟ ಸಭೆಯಲ್ಲಿಯೇ ಆಡಳಿತಾತ್ಮಕ ಅನುಮೋದನೆ ನೀಡಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಯೋಜನೆ ಜನವರಿಯಿಂದ ಜಾರಿಗೆ ಬರಲಿದ್ದು, ಸುಮಾರು ನಾಲ್ಕೂವರೆ ಲಕ್ಷ ಯುವಜನತೆಗೆ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ.
ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.
ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ.

Siddaramaiah ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.
ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,
ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.
ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...