Tuesday, October 1, 2024
Tuesday, October 1, 2024

Crime News ಭದ್ರಾವತಿ ಪೊಲೀಸರ ಬಲೆಗೆ ಬಿದ್ದ ಮೈಸೂರಿನ ಹನಿಟ್ರ್ಯಾಪ್ ಗ್ಯಾಂಗ್

Date:

Crime News ಹನಿತ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ನ್ನು ಭದ್ರಾವತಿಯ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.

ಮೈಸೂರು ಮೂಲದ ಐದು ಜನರನ್ನ ಭದ್ರಾವತಿಯ ಹೊಸ ಮನೆ ಶಿವಾಜಿ ಸರ್ಕಲ್ ಪೊಲೀಸರು ಬಂಧಿಸಿದ್ದಾರೆ…
ಭದ್ರಾವತಿಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದ್ದ ಶರತ್ ಕುಮಾರ್ ಎಂಬವರ ದೂರಿನ ಮೇರೆಗೆ ಪೊಲೀಸರು ಶ್ವೇತಾ, ವಿನಾಯಕ, ಮಹೇಶ್, ಯಲ್ಲಪ್ಪ ಮತ್ತು ಅರುಣ್ ಕುಮಾರ್ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ಬಳಿ ಇದ್ದ ಡಸ್ಟರ್ ಕಾರು ಹಾಗೂ 7 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಭದ್ರಾವತಿಯ ಶರತ್ ಎಂಬುವರಿಗೆ ಶ್ವೇತಾ ಅವರು ಪರಿಚಯವಾಗಿದ್ದರು. ಆಕೆ ಬೆತ್ತಲೆಯಾಗಿ ವಿಡಿಯೋ ಕಾಲ್ ಮಾಡಿ 20 ಲಕ್ಷ ಬೇಡಿಕೆ ಇಟ್ಟಿದ್ದಳು. ಬಳಿಕ ಶರತ್ ಹತ್ತಿರ ಒಂದು ಲಕ್ಷ ರೂಪಾಯಿ ಹಣವನ್ನು ಹೆದರಿಸಿ ಕಿತ್ತುಕೊಂಡಿದ್ದಳು.

ಶರತ್ ಹತ್ತಿರ ಒತ್ತಾಯಪೂರ್ವಕವಾಗಿ 25 ಲಕ್ಷ ಸಾಲ ಪಡೆಯುವುದು ಕೊಂಡಿರುವುದಾಗಿ ಸಹಿಯನ್ನು ಶ್ವೇತ ಹಾಗೂ ಆಕೆಯ ಗ್ಯಾಂಗ್ ಹಾಕಿಸಿಕೊಂಡಿದ್ದರು. ಮೈಸೂರಿನಲ್ಲಿ ಶರತ್ ಅವರನ್ನ ಎರಡು ದಿನಗಳ ಕಾಲ ಕೂಡಿಹಾಕಿ ಹಲ್ಲೆ ಕೂಡ ಮಾಡಿದ್ದರು. ಅಲ್ಲಿಂದ ತಪ್ಪಿಸಿಕೊಂಡು ಶರತ್ ಅವರು ಭದ್ರಾವತಿಯ ಪೊಲೀಸರಿಗೆ ದೂರು ನೀಡಿದ್ದರು.

Crime News ಪೊಲೀಸರು, ಶರತ್ ದೂರಿನ ಮೆರೆಗೆ ಮೈಸೂರಿನಲ್ಲಿ ಹನಿ ಟ್ರ್ಯಾಪ್ ಗ್ಯಾಂಗ್ ನ ಲೀಡರ್ ಶ್ವೇತಾ ಹಾಗೂ ಅವರ ಗ್ಯಾಂಗ್ ಅನ್ನ ಪೊಲೀಸರು ಸೆರೆ ಹಿಡಿದಿದ್ದಾರೆ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...