Friday, December 5, 2025
Friday, December 5, 2025

D. K. Shivakumar ಸಮುದ್ರ ಹೊರಾತಾಗಿ ಸಿಹಿ ನೀರಿನಲ್ಲಿ ಮೀನುಕೃಷಿಗೆ ಮುಂದಾಗಿ- ಡಿ.ಕೆ.ಶಿವ ಕುಮಾರ್

Date:

D. K. Shivakumar ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಂಡು ಮಾತನಾಡಿದರು.

ಮೀನನ್ನು ನಾವು ದೇವರ ಸ್ವರೂಪ ಎಂದು ಕರೆಯುತ್ತೇವೆ. ಶ್ರೀಮನ್‌ ನಾರಾಯಣನಿಗೆ ಮೀನನ್ನು ಹೋಲಿಸುತ್ತೇವೆ. ನಾವು ಚುನಾವಣೆಗೆ ಮುಂಚಿತವಾಗಿ ಮೀನುಗಾರಿಕಾ ಸಮುದಾಯಕ್ಕೆ ಸಾಕಷ್ಟು ಭರವಸೆ ನೀಡಿದ್ದೆವು ಅವನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ. ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಮಾನ್ಯ ಮೀನುಗಾರಿಕಾ ಸಚಿವರಾದ ಮಂಕಾಳ ವೈದ್ಯ ಅವರು ಸರ್ಕಾರದ ಸಹಕಾರ ಪಡೆದು ಸಮುದಾಯದವರಿಗೆ ಸಾಕಷ್ಟು ಸೌಲಭ್ಯಗಳನ್ನು ತಲುಪಿಸುತ್ತಿದ್ದಾರೆ. ಬರೀ ಸಮುದ್ರದಲ್ಲೇ ಮೀನುಗಾರಿಕೆ ಮಾಡುವುದಕ್ಕಿಂತ ಸಿಹಿ ನೀರಿನ ಮೀನುಗಾರಿಕೆ ಮಾಡಲು ಸಮುದಾಯದವರು ಮುಂದಾಗಬೇಕು. ಸರ್ಕಾರ ಈಗಾಗಲೇ ಏತ ನೀರಾವರಿ ಮೂಲಕ ಸಾಕಷ್ಟು ಕೆರೆಗಳನ್ನು ತುಂಬಿಸಿದ್ದು ಹರಾಜಿನ ಮೂಲಕ ಹಂಚಿಕೆ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್
ಭರವಸೆ ನೀಡಿದರು.

D. K. Shivakumar ಎಳೆಯ ಪ್ರಾಯದಲ್ಲಿ ನಾನು ಕೂಡ ನಮ್ಮೂರಿನ ಬಳಿಯ ಸಂಗಮದಲ್ಲಿ ಮೀನು ಹಿಡಿಯಲು ಹೋಗುತ್ತಿದ್ದೆ. ಗಾಳ ಹಾಕಿ ತಾಸುಗಟ್ಟಲೆ ಕುಳಿತುಕೊಳ್ಳಲು ತಾಳ್ಮೆ ಬೇಕು. ಮಹಶೀರ್‌ ಮೀನು ಹಿಡಿದು ಕೆರೆಯಲ್ಲಿ ವಾಪಸ್‌ ಬಿಡಲು ಆಗ ಹೊರದೇಶದಿಂದಲೂ ಬರುತ್ತಿದ್ದರು. ಮೀನುಗಾರಿಕಾ ಸಮುದಾಯದವರೂ ಕೂಡ ಉತ್ತಮ ತಳಿಗಳನ್ನು ತಂದು ಸಾಕಿ ಲಾಭ ಮಾಡಬೇಕು ಎಂದು ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...