Wednesday, September 16, 2026
Wednesday, September 16, 2026

D. K. Shivakumar ಸಮುದ್ರ ಹೊರಾತಾಗಿ ಸಿಹಿ ನೀರಿನಲ್ಲಿ ಮೀನುಕೃಷಿಗೆ ಮುಂದಾಗಿ- ಡಿ.ಕೆ.ಶಿವ ಕುಮಾರ್

Date:

D. K. Shivakumar ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಂಡು ಮಾತನಾಡಿದರು.

ಮೀನನ್ನು ನಾವು ದೇವರ ಸ್ವರೂಪ ಎಂದು ಕರೆಯುತ್ತೇವೆ. ಶ್ರೀಮನ್‌ ನಾರಾಯಣನಿಗೆ ಮೀನನ್ನು ಹೋಲಿಸುತ್ತೇವೆ. ನಾವು ಚುನಾವಣೆಗೆ ಮುಂಚಿತವಾಗಿ ಮೀನುಗಾರಿಕಾ ಸಮುದಾಯಕ್ಕೆ ಸಾಕಷ್ಟು ಭರವಸೆ ನೀಡಿದ್ದೆವು ಅವನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ. ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಮಾನ್ಯ ಮೀನುಗಾರಿಕಾ ಸಚಿವರಾದ ಮಂಕಾಳ ವೈದ್ಯ ಅವರು ಸರ್ಕಾರದ ಸಹಕಾರ ಪಡೆದು ಸಮುದಾಯದವರಿಗೆ ಸಾಕಷ್ಟು ಸೌಲಭ್ಯಗಳನ್ನು ತಲುಪಿಸುತ್ತಿದ್ದಾರೆ. ಬರೀ ಸಮುದ್ರದಲ್ಲೇ ಮೀನುಗಾರಿಕೆ ಮಾಡುವುದಕ್ಕಿಂತ ಸಿಹಿ ನೀರಿನ ಮೀನುಗಾರಿಕೆ ಮಾಡಲು ಸಮುದಾಯದವರು ಮುಂದಾಗಬೇಕು. ಸರ್ಕಾರ ಈಗಾಗಲೇ ಏತ ನೀರಾವರಿ ಮೂಲಕ ಸಾಕಷ್ಟು ಕೆರೆಗಳನ್ನು ತುಂಬಿಸಿದ್ದು ಹರಾಜಿನ ಮೂಲಕ ಹಂಚಿಕೆ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್
ಭರವಸೆ ನೀಡಿದರು.

D. K. Shivakumar ಎಳೆಯ ಪ್ರಾಯದಲ್ಲಿ ನಾನು ಕೂಡ ನಮ್ಮೂರಿನ ಬಳಿಯ ಸಂಗಮದಲ್ಲಿ ಮೀನು ಹಿಡಿಯಲು ಹೋಗುತ್ತಿದ್ದೆ. ಗಾಳ ಹಾಕಿ ತಾಸುಗಟ್ಟಲೆ ಕುಳಿತುಕೊಳ್ಳಲು ತಾಳ್ಮೆ ಬೇಕು. ಮಹಶೀರ್‌ ಮೀನು ಹಿಡಿದು ಕೆರೆಯಲ್ಲಿ ವಾಪಸ್‌ ಬಿಡಲು ಆಗ ಹೊರದೇಶದಿಂದಲೂ ಬರುತ್ತಿದ್ದರು. ಮೀನುಗಾರಿಕಾ ಸಮುದಾಯದವರೂ ಕೂಡ ಉತ್ತಮ ತಳಿಗಳನ್ನು ತಂದು ಸಾಕಿ ಲಾಭ ಮಾಡಬೇಕು ಎಂದು ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...